ಬಿಟ್ಕಾಯಿನ್ ಪ್ರಕರಣದ ಆರೋಪಿ ಹ್ಯಾಕರ್ ಶ್ರೀಕಿ ಪೊಲೀಸರ ವಶಕ್ಕೆ! | ಜನತಾ ನ್ಯೂಸ್
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಬಿಟ್ ಕಾಯಿನ್ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಆಲಿಯಾಸ್ ಶ್ರೀಕೃಷ್ಣ ಎಂಬಾತನನ್ನು ಹಲ್ಲೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಹೋಟೆಲ್ ನಲ್ಲಿ ತಂಗಿದ್ದ ಶ್ರೀಕಿಯನ್ನು ಗೆಳೆಯ ವಿಷ್ಣು ಭಟ್ ಭೇಟಿಯಾಗಲು ಬಂದಿದ್ದಾನೆ. ಕುಡಿದ ಮತ್ತಿನಲ್ಲಿದ್ದ ವಿಷ್ಣು ಭಟ್ ಹೋಟೆಲ್ ನ ಸೆಕ್ಯೂರಿಟಿ ಜೊತೆ ಜಗಳವಾಡಿ, ಹಲ್ಲೆ ಮಾಡಿದ್ದಾನೆ. ಸೆಕ್ಯೂರಿಟಿ ಗಾರ್ಡ್ ಕೆನ್ನೆಗೆ ಹೊಡೆದಿದ್ದಾನೆ.
ಆರೋಪಿ ಶ್ರೀಕಿಯೂ ಕೂಷಡ ಹಲ್ಲೆ ನಡೆಸಲು ಮುಂದಾಗಿದ್ದ. ಇದರಿಂದ ಹೋಟೆಲ್ ಸಿಬ್ಬಂದಿ ಜೀವನ್ ಭಿಮಾನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಆಧರಿಸಿ ಶ್ರೀಕಿ ಜೊತೆ, ವಿಷ್ಣುಭಟ್ ಎಂಬಾತನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ 2 ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದ. ಇದೀಗ ಹಲ್ಲೆ ಪ್ರಕರಣದಲ್ಲಿ ಬಂಧಿಯಾಗಿರುವುದು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಕಳೆದ ಒಂದೂವರೆ ತಿಂಗಳಿಂದ ಸ್ಟಾರ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿರುವುದು ತಿಳಿದು ಬಂದಿದೆ. ಶ್ರೀಕಿ ಬಳಸ್ತಿದ್ದ ಲ್ಯಾಪ್ ಟಾಪನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.