ಪದ್ಮ ಪ್ರಶಸ್ತಿ 2020 : ಅದ್ನಾನ್ ಸಾಮಿ, ಕಂಗನಾ, ಸಿಂಧು, ಕರಣ್ ಸೇರಿದಂತೆ ಹಲವರಿಗೆ ಗೌರವ ಪ್ರಧಾನ | ಜನತಾ ನ್ಯೂಸ್
ನವದೆಹಲಿ : ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಅಧಿಕೃತ ಸಮಾರಂಭ ಇಂದು ನವೆಂಬರ್ 8ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಾರಂಭವಾಯಿತು. ದೇಶದ ಅತ್ಯುನ್ನತ ಪ್ರಶಸ್ತಿ ಪಟ್ಟಿಯಲ್ಲಿ 7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳನ್ನು ಒಳಗೊಂಡಿದ್ದವು.
ಭಾರತ ರತ್ನ, ಪದ್ಮ ವಿಭೂಷಣ ಮತ್ತು ಪದ್ಮಭೂಷಣ ನಂತರ ಪದ್ಮಶ್ರೀ ಭಾರತದಲ್ಲಿ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಿದ್ದಾರೆ. ಪ್ರಶಸ್ತಿ ಪುರಸ್ಕೃತರಲ್ಲಿ 29 ಮಹಿಳೆಯರು, 16 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಮತ್ತು 1 ಲಿಂಗಪರಿವರ್ತಿತರು ಪ್ರಶಸ್ತಿ ಪುರಸ್ಕೃತರು.
ಪದ್ಮ ಭೂಷಣ ಪ್ರಶಸ್ತಿಯನ್ನು ಒಲಿಂಪಿಯನ್ ಪಿ.ವಿ.ಸಿಂಧು ಸ್ವೀಕರಿಸಿದರೆ. ನಟಿ ಕಂಗನಾ ರಣಾವತ್, ಚಿತ್ರ ನಿರ್ಮಾಪಕ ಕರಣ್ ಜೋಹರ್, ನಿರ್ಮಾಪಕಿ ಏಕ್ತಾ ಕಪೂರ್, ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್, ನಿರ್ಮಾಪಕ ಗಾಯಕರಾದ ಸುರೇಶ್ ವಾಡ್ಕರ್ ಮತ್ತು ಅದ್ನಾನ್ ಸಾಮಿ ಸೇರಿದಂತೆ ಅನೇಕರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಪದ್ಮ ಶ್ರೀ ಪ್ರಶಸ್ತಿಗಳನ್ನು ಸ್ವೀಕರಿಸಿದರು.
ಪದ್ಮ ಶ್ರೀ ಪ್ರುರಸ್ಕೃತರ ಸಾಲಿಗೆ ಐಸಿಎಂಆರ್ ನ ಮಾಜಿ ಮುಖ್ಯ ವಿಜ್ಞಾನಿ ಡಾ ರಾಮನ್ ಗಂಗಾಖೇಡ್ಕರ್, ಏರ್ ಮಾರ್ಷಲ್ ಡಾ ಪದ್ಮಾ ಬಂಡೋಪಾಧ್ಯಾಯ ಇತರರು ಕೂಡ ಸೇರಿದ್ದಾರೆ.
ಬಿಜೆಪಿಯ ದಿವಂಗತ ನಾಯಕರಾದ ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಮತ್ತು ದಿವಂಗತ ಗಾಯಕ ಎಸ್ಪಿ ಬಾಲಸುಬ್ರಮಣ್ಯಂ ಅವರಿಗೂ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು
ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪರವಾಗಿ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದರು.
ಪ್ರತಿಷ್ಠಿತ ನಾಗರಿಕ ಪದ್ಮವಿಭೂಷಣ ಪ್ರಶಸ್ತಿಗಳನ್ನು ಪಡೆದ ಇತರ ಪ್ರಮುಖ ಹೆಸರುಗಳೆಂದರೆ ಹಿಂದೂಸ್ತಾನಿ ಶಾಸ್ತ್ರೀಯ ಪ್ರತಿಪಾದಕ ಪಂಡಿತ್ ಛನ್ನುಲಾಲ್ ಮಿಶ್ರಾ ಆಗಿದ್ದಾರೆ.