ಹಾಡಹಗಲೇ ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಲಾಂಗ್ ಇಂದ ಹಲ್ಲೆ! | ಜನತಾ ನ್ಯೂಸ್
ಬೆಂಗಳೂರು : ಹಾಡಹಗಲೇ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಏಕಾಏಕಿ ಲಾಂಗ್ ತೋರಿಸಿ ಹಣದ ಬ್ಯಾಗ್ ಕಸಿಯುವ ವಿಫಲ ಯತ್ನ ನಡೆಸಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೈಸೂರು ರಸ್ತೆಯಲ್ಲಿರುವ ರಚನಾ ಪೆಟ್ರೋಲ್ ಬಂಕ್ಗೆ ವಿಳಾಸ ಕೇಳುವ ನೆಪದಲ್ಲಿ ಬೈಕ್ನಲ್ಲಿ ಬಂದಿರುವ ದುಷ್ಕರ್ಮಿಗಳು ಕ್ಯಾಶಿಯರ್ ಬಳಿ ಹೋಗಿ ವಿಳಾಸ ಕೇಳಿದ್ದಾರೆ. ವಿಳಾಸ ಹೇಳುತ್ತಿದ್ದ ಕ್ಯಾಶಿಯರ್ ಬ್ಯಾಗ್ ಕಸಿದುಕೊಳ್ಳಲು ಯತ್ನಿಸಿದ್ದಾರೆ.
ನಿರಾಕರಿಸಿದ ಆತನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಇಷ್ಟಾದರೂ ಬ್ಯಾಗ್ ಬಿಟ್ಟಿಲ್ಲ. ಕೂಡಲೇ ಆತನ ಸ್ನೇಹಿತರು ನೆರವಿಗೆ ಬಂದಿದ್ದು, ದುಷ್ಕರ್ಮಿಗಳು ಬೈಕ್ನಲ್ಲಿ ಪರಾರಿಯಾಗಿದ್ದಾರೆ. ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬ್ಯಾಟರಾಯನ ಪುರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.