Tue,Apr30,2024
ಕನ್ನಡ / English

ಹಿಂದೂ ಧರ್ಮದ ವಿರುದ್ಧ ವಾಗ್ದಾಳಿ ನಡೆಸುವ ಎಲ್ಲಾ ಪ್ರಯತ್ನವನ್ನೂ ರಾಹುಲ್ ಗಾಂಧಿ ಮಾಡುತ್ತಾರೆ - ಬಿಜೆಪಿ | ಜನತಾ ನ್ಯೂಸ್

12 Nov 2021
2116

ನವದೆಹಲಿ : ಹಿಂದೂತ್ವ ಅಂದರೆ ಒಬ್ಬ ಸಿಖ್ ಹಾಗೂ ಮುಸ್ಲಿಂರನ್ನು ಹೊಡೆಯುವುದು, ಅಮಾಯಕರನ್ನು ಕೊಲ್ಲುವುದು, ಎಂದಿರುವ ರಾಹುಲ್ ಗಾಂಧಿ ಹೇಳಿಕೆ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಟೀಕೆಗೆ ಗುರಿಯಾಗಿದೆ. ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಕ್ತಾರರಾದ ಸಂಬಿತ್ ಪಾತ್ರ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ಮತ್ತು ಗಾಂಧಿ ಪರಿವಾರ ಹಿಂದೂ ಧರ್ಮದ ವಿರುದ್ಧ "ರೋಗಗೃಸ್ತ ದ್ವೇಷ" ಹೊಂದಿವೆ, ಎಂದಿದ್ದಾರೆ.

ಸಲ್ಮಾನ್ ಖುರ್ಷಿದ್ ಅವರ ಅಯೋಧ್ಯೆ ಕುರಿತಾದ ಪುಸ್ತಕ ಮತ್ತು "ಹಿಂದುತ್ವ"ವನ್ನು ಐಸಿಸ್‌ನಂತಹ ಭಯೋತ್ಪಾದಕ ಗುಂಪುಗಳೊಂದಿಗೆ ಹೋಲಿಸುವ ಪ್ರಯತ್ನದ ಬೆನ್ನಲ್ಲೇ, ಇಂದು 51ವರ್ಷದ ವಾಯನಾಡು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಹಿಂದುತ್ವದ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದಾರೆ.

ಹಿಂದೂ ಧರ್ಮದ ವಿರುದ್ಧ ಹೇಳಿಕೆ ನೀಡುವ ಪ್ರಹಾರ ಮಾಡುವ ಎಲ್ಲ ರೀತಿಯ ಪ್ರಯತ್ನವನ್ನೂ ರಾಹುಲ್ ಗಾಂಧಿ ಅವಶ್ಯವಾಗಿ ಮಾಡುತ್ತಾರೆ, ಎಂದಿದ್ದಾರೆ ಸಂಬಿತ್ ಪಾತ್ರ.

"ದೇವಸ್ಥಾನಕ್ಕೆ ಹೋಗುವ ಹುಡುಗರು ಕೆಟ್ಟವರರಾಗಿರುತ್ತಾರೆ, ಹುಡುಗಿಯರನ್ನು ಚುಡಾಯಿಸುವವರು", ಎಂದು ಹೇಳುವ ರಾಹುಲ್ ಗಾಂಧಿಯವರು ಚುನಾವಣೆಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. 2019ರ ಚುನಾವಣೆಗೂ ಮುನ್ನ ಇದೇ ಕಾಂಗ್ರೆಸ್ ಪಕ್ಷ ಸುಪ್ರಿಂಕೋರ್ಟ್ ನಲ್ಲಿ ಶ್ರೀರಾಮ ಮಂದಿರದ ವಿಚಾರಣೆಯನ್ನು ಮುಂದುಡುವಂತೆ ತುಂಬಾ ಪ್ರಯತ್ನಮಾಡಿತ್ತು. ಶ್ರೀರಾಮನ ಅಸ್ತಿತ್ವ ಕೇವಲ ಕಾಲ್ಪನಿಕ ಎಂಬ ಆಫಿಡಿವೇಟ್ ನ್ನು ಕೂಡ ಇದೇ ಕಾಂಗ್ರೆಸ್ ನೀಡಿತ್ತು, ಎಂದು ಸಂಬಿತ್ ಪಾತ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ರಾಹುಲ್ ಗಾಂಧಿಯವರು "ಹಿಂದೂ ಧರ್ಮ" ಮತ್ತು ಅದರ ಸಂಸ್ಕೃತಿಯನ್ನು ಟೀಕಿಸುವ ಚರಿತ್ರೆ ಹೊಂದಿದ್ದಾರೆ ಮತ್ತು ಹಿಂದೂ ಧರ್ಮದ ಮೇಲೆ ಆಕ್ರಮಣ ಮಾಡುವ ಮತ್ತು ಸಮಾಜದಲ್ಲಿ "ದ್ವೇಷ"ವನ್ನು ಹರಡುವುದು ಕಾಂಗ್ರೆಸ್‌ನ "ಕೆಲಸ" ಎಂದು ಬಿಜೆಪಿ ನಾಯಕ ಘೋಷಿಸಿದರು.

"ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬದ ಪ್ರತಿ ಅವಕಾಶದಲ್ಲೂ ಹಿಂದೂ ಧರ್ಮದ ಮೇಲೆ ಆಕ್ರಮಣ ಮಾಡುವುದು ಅವರ ಸ್ವಭಾವದಲ್ಲಿದೆ ... ಅವರು ಹೇಳುವುದು ಕಾಕತಾಳೀಯವಲ್ಲ ಆದರೆ ಒಂದು ಪ್ರಯೋಗವಾಗಿದೆ. ಮತ್ತು ಈ ಪ್ರಯೋಗಾಲಯದ ಮುಖ್ಯೋಪಾಧ್ಯಾಯರು ರಾಹುಲ್ ಗಾಂಧಿ", ಎಂದು ಸಂಬಿತ್ ಪಾತ್ರ ಉಲ್ಲೇಖಿಸಿದ್ದಾರೆ.

"ಕಾಂಗ್ರೆಸ್ ನಾಯಕರಲ್ಲಿ ಹಿಂದೂ ಧರ್ಮದ ಬಗ್ಗೆ ರೋಗಗೃಸ್ತ ದ್ವೇಷವಿದೆ ... ಮತ್ತು ಅವರು ಗಾಂಧಿ ಕುಟುಂಬದಿಂದ ಇದಕ್ಕೆ ಒತ್ತಡವನ್ನು ಪಡೆಯುತ್ತಾರೆ", ಎಂದು ಅವರು ಆರೋಪಿಸಿದರು.

ಗಾಂಧಿಯವರು "ಹಿಂದೂ ಧರ್ಮ" ಮತ್ತು "ಹಿಂದುತ್ವ"ಗಳ ನಡುವೆ ವ್ಯತ್ಯಾಸವನ್ನು ಏಕೆ ತೋರಿಸುತ್ತಾರೆ ಎಂದು ಕೇಳಿದಾಗ, ಉತ್ತರಿಸಿದ ಪತ್ರಾ ಅವರು, "ಅವರು ಇತರ ಧರ್ಮಗಳ ಬಗ್ಗೆ ಇದೇ ರೀತಿಯ ರೀತಿಯಲ್ಲಿ ಮಾತನಾಡಬಹುದೇ? ಖಂಡಿತ ಇಲ್ಲ. ಅವರು ಬೇರೆ ಯಾವುದೇ ಧರ್ಮದಲ್ಲಿ ಇದೇ ರೀತಿಯ ವಿಷಯಗಳ ಬಗ್ಗೆ ಮಾತನಾಡಲು ಸಾಧ್ಯವಿಲ್ಲ. ಸಾರ್ವಕಾಲಿಕ ಹಿಂದೂ ಧರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ. ಅವರು ಏಕೆ ಮಾಡುತ್ತಾರೆ ಎಂಬುದು ಪ್ರಶ್ನೆ, ಎಂದು ಹೇಳಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಮುಖಂಡರುಗಳು "ಹಿಂದೂ ತಾಲಿಬಾನ್, ಕೇಸರಿ ಭಯೋತ್ಪಾದನೆ"ಯಂತಹ ಪದಗಳನ್ನು ಬಳಸಿದ್ದನ್ನು ಉಲ್ಲೇಖಿಸಿದ ಪತ್ರಾ ಅವರು, ಶಶಿ ತರೂರ್, ದಿಗ್ವಿಜಯ್ ಸಿಂಗ್ ಮತ್ತು ಮಣಿಶಂಕರ್ ಅಯ್ಯರ್ ಅವರಂತಹ ನಾಯಕರು ನೀಡುವ ಹಿಂದೂ ಧರ್ಮದ ವಿರುದ್ಧದ ಹೇಳಿಕೆಗಳು ಅವರ ವೈಯಕ್ತಿಕ ಹೇಳಿಕೆಯಾಗಿರದೇ, ರಾಹುಲ್ ಗಾಂಧಿ ಅವರಿಂದ ನಿರ್ದೇಶಿಸಲ್ಪಟ್ಟ ಹೇಳಿಕೆ ಯಾಗಿರುತ್ತದೆ," ಎಂದು ಸಂಬಿತ್ ಪಾತ್ರ ತಿಳಿಸಿದ್ದಾರೆ.

RELATED TOPICS:
English summary :Rahul Gandhi always tries to attack Hindu religion - BJP

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...