Sat,May18,2024
ಕನ್ನಡ / English

ಪುನೀತ್ ಫೋಟೋ ಎದುರು ಶಾಂಪೇನ್ ಬಾಟಲಿ ಓಪನ್; ಅಪ್ಪು ಫ್ಯಾನ್ಸ್‌ಗಳಿಗೆ ಕ್ಷಮೆಯಾಚಿಸಿದ ನಟಿ ರಚಿತಾ ರಾಮ್ | ಜನತಾ ನ್ಯೂಸ್

13 Nov 2021
2870

ಬೆಂಗಳೂರು : ನಿನ್ನೆ ಖಾಸಗಿ ಹೋಟೆಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಂಪೇನ್​ ಓಪನ್​ ಮಾಡುವ ವೇಳೆ ಪರದೆಯ ಮೇಲೆ ಚಿತ್ರದ ಗೀತೆ ಬದಲು ಅಪ್ಪು ನಮನದ ವಿಡಿಯೋ ಪ್ಲೇ ಆಗಿ ಸಾಕಷ್ಟು ಅವಾಂತರ ಸೃಷ್ಟಿಸಿತ್ತು.

ಆ ಮೂಲಕ ಅಪ್ಪು ಅಭಿಮಾನಿಗಳ ಕೆಂಗಣ್ಣಿಗೆ ಚಿತ್ರತಂಡ ಗುರಿಯಾಗಿತ್ತು. ಇನ್ನು ಈ ಕುರಿತು "ಏಕ್​ ಲವ್​ ಯಾ" ಚಿತ್ರದಲ್ಲಿ ಅಭಿನಯಿಸಿರುವ ರಚಿತಾ ರಾಮ್​ ಟ್ವೀಟ್​ ಮಾಡಿ ಕ್ಷಮೆಕೋರಿದ್ದಾರೆ.

ನಿನ್ನೆಯ ಘಟನೆ ಬಗ್ಗೆ ನಿಮ್ಮೆಲ್ಲರಿಗೂ ಅಸಮಾಧಾನವಾಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ. ನಾನು ಕೂಡ ಚಿತ್ರದ ಭಾಗವಾಗಿರೋದ್ರಿಂದ ಕ್ಷಮೆ ಕೇಳುತ್ತೇನೆ. ಅಪ್ಪು ಅವರಿಗೆ ಅವಮಾನ ಮಾಡೋ ಉದ್ದೇಶ, ಅಥವಾ ಆಲೋಚನೆ ಯಾವ ಕನ್ನಡಿಗರಿಗೂ ಇರೋಲ್ಲ.. ಅದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸಿತ್ತಾರೆಂದು ನಂಬಿದ್ದೇನೆ. ಎಂದು ಟ್ವೀಟ್​ ಮಾಡಿದ್ದಾರೆ.

ನಾನು ಬಾಟಲ್ ಓಪನ್ ಮಾಡುವಾಗ ತಾಂತ್ರಿಕ ತೊಂದರೆಯಿಂದಾಗಿ ಅಪ್ಪು ಫೋಟೋ ಎಲ್‍ಇಡಿ ಮೇಲೆ ಬಂದು ಬಿಟ್ಟಿತ್ತು. ನಾವು ಯಾರ ಭಾವನೆಯನ್ನು ನೋಯಿಸುವ ಉದ್ದೇಶ ಇರಲಿಲ್ಲ. ಸಾಂಗ್ ರಿಲೀಸ್ ಕಾರ್ಯಕ್ರಮವಾಗಿತ್ತು. ಆ ಹಾಡಿಗೆ ಸಂಬಧಪಟ್ಟಂತೆ ನಾವು ಎನೋ ಮಾಡಲು ಹೋಗಿ ಹೀಗೆ ಆಯ್ತು. ಅಪ್ಪು ಅಭಿಮಾನಿಗಳಿಗೆ ಈ ವಿಚಾರವಾಗಿ ನೋವು ಆಗಿದೆ ಎಂದು ಕ್ಷಮೆ ಕೇಳಿದ್ದಾರೆ.

janata


ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದ ನಿರ್ಮಾಪಕ ಸಾ.ರಾ. ಗೋವಿಂದು, "ಪುನಿತ್ ರಾಜ್‌ಕುಮಾರ್‌ಗೆ ಅವಮಾನ ಆಗುವಂತೆ ನಮ್ಮ ಚಿತ್ರರಂಗದವರು ನಡೆದುಕೊಂಡಿದ್ದರಿಂದ ಈಗ ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ. "ಏಕ್ ಲವ್ ಯಾ" ಚಿತ್ರತಂಡದವರು ಅಪ್ಪು ಅಭಿಮಾನಿಗಳಲ್ಲಿ ತಕ್ಷಣವೇ ಕ್ಷಮೆ ಕೇಳಬೇಕು" ಎಂದು ಆಗ್ರಹಿಸಿದ್ದರು.

ಅಪ್ಪು ಅವರ ಅಗಲಿಕೆಯ ನೋವು ಇನ್ನೂ ನಮ್ಮ ಮನಸ್ಸಿನಲ್ಲಿದೆ, ಆ ಕಾರಣಕ್ಕೆ ನ.4ರಂದು ಬಿಡುಗಡೆಯಾಗಬೇಕಿದ್ದ ಹಾಡನ್ನು ನ.12ಕ್ಕೆ ಮಾಡಲಾಯಿತು, ಸಮಾರಂಭದ ಉದ್ಘಾಟನೆಯೇ ಅಪ್ಪು ಅವರನ್ನು ನೆನೆಯುತ್ತಾ, ಅವರ ವ್ಯಕ್ತಿತ್ವ ಹಾಗು ಅವರ ಜೊತೆ ಕಳೆದ ಕ್ಷಣಗಳನ್ನು ನೆನೆಯುತ್ತಾ ಶುರುವಾಯಿತು. ಈ ಹಾಡು ಶುರುವಾಗುವುದೇ ಅಪ್ಪು ಅಮರ ಎಂದು ಗೌರವ ಸಲ್ಲಿಸುತ್ತಾ. ಅಪ್ಪು ಅವರ ಫೋಟೋ ಮುಂದೆ ಶಾಂಪೇನ್ ಓಪನ್ ಮಾಡಿದ ಉದ್ದೇಶ ಕೇವಲ ಹಾಡಿನ ಬಿಡುಗಡೆಯ ಅಂಗವಾಗಿತ್ತು. ಅದು ಅಷ್ಟಕ್ಕೇ ಸೀಮಿತ. ಇದರಿಂದ ಅಪ್ಪು ಅವರ ಅಭಿಮಾನಿಗಳಿಗೆ ನೋವಾಗಿದ್ದಲ್ಲಿ ನನ್ನ ಹಾಗೂ ನನ್ನ ಇಡೀ "ಏಕ್ ಲವ್ ಯಾ" ಚಿತ್ರತಂಡದ ಕಡೆಯಿಂದ ಕ್ಷಮೆಯಾಚಿಸುತ್ತೇವೆ ಎಂದು ಜೋಗಿ ಪ್ರೇಮ್ ಪೋಸ್ಟ್ ಹಾಕಿದ್ದಾರೆ.

ಏಕ್ ಲವ್ ಯಾ ಸಿನಿಮಾ ತಂಡ ಸಾಂಗ್ ರಿಲೀಸ್ ಕಾರ್ಯಕ್ರಮವನ್ನು ಆಯೋಜಿಸಿತ್ತು, ಈ ವೇಳೆ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸಲಾಯಿತ್ತು. ಆದರೆ ಶ್ರದ್ಧಾಂಜಲಿ ವೇಳೆ ಅಪ್ಪು ಫೋಟೋ ಮುಂದೆ ನಟಿ ರಕ್ಷಿತಾ ಪ್ರೇಮ್ ಶಾಂಪೇನ್ ಚಿಮ್ಮಿಸಿದ್ದರು. ಈ ವೇಳೆ ಅಪ್ಪು ಅವರ ಫೋಟೋ ಎಲ್‍ಇಡಿ ಮೇಲೆ ಬಂದಿದೆ. ಈ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರ ಆಗಿತ್ತು. ಇದನ್ನು ಗಮನಿಸಿದ ಸಾರಾ ಗೋವಿಂದ್ ಅವರು, ಅಪ್ಪು ಅಗಲಿಕೆ ನೋವಿನಿಂದ ಹೊರಬಂದಿಲ್ಲ. ಆದರೆ ಇಲ್ಲಿ ಅಪ್ಪು ಅವರಿಗೆ ಅವಮಾನ ಮಾಡಿದಂತಾಗಿದೆ. ಹೀಗಾಗಿ ಚಿತ್ರತಂಡ ಕೂಡಲೇ ಕ್ಷಮೆ ಕೇಳಬೇಕು ಎಂದು ಸೂಚನೆ ನೀಡಿದ್ದರು. ಅಂತೆಯೇ ಇದೀಗ ಪ್ರೇಮ್ ಹಾಗೂ ಅಕುಲ್ ಬಾಲಾಜಿ, ನಟಿ ರಕ್ಷಿತಾ ಪ್ರೇಮ್, ರಚಿತಾ ರಾಮ್ ಸೇರಿದಂತೆ ಇಡೀ ಚಿತ್ರತಂಡ ಕ್ಷಮೆ ಕೇಳಿದೆ.

RELATED TOPICS:
English summary :Rachita Ram

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...