ತಿರುಪತಿಯಲ್ಲಿ ಕರ್ನಾಟಕ ಭವನ ಕಟ್ಟಡ ನಿರ್ಮಾಣ, ಸಿಎಂ ಬೊಮ್ಮಾಯಿ ಪರಿಶೀಲನೆ! | ಜನತಾ ನ್ಯೂಸ್
ತಿರುಪತಿ : ಆಂಧ್ರಪ್ರದೇಶದ ತಿರುಪತಿಯಲ್ಲಿ ಕರ್ನಾಟಕ ಭವನ ಕಟ್ಟಡ ನಿರ್ಮಾಣ ಕೆಲಸವನ್ನು ಇಂದು ಸಿಎಂ ಬೊಮ್ಮಾಯಿ ಪರಿಶೀಲನೆ ನಡೆಸಿದರು.
ಇಂದು ತಿರುಮಲದ ವೆಂಕಟೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ನಿರ್ಮಾಣದ ಕಟ್ಟಡ ಕಾಮಗಾರಿ ಪರಿಶೀಲಿಸಿದರು. 200 ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ಭವನ ನಿರ್ಮಾಣವಾಗುತ್ತಿದೆ.
ಕರ್ನಾಟಕ ಭವನ ಕಟ್ಟಡವನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ಸಚಿವರಾದ ಡಾ. ಕೆ ಸುಧಾಕರ್, ಮುನಿರತ್ನ, ಬಿಡಿಎ ಅಧ್ಯಕ್ಷ ಎಸ್ಆರ್ ವಿಶ್ವನಾಥ್ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಟಿಟಿಡಿ ನಿರ್ದೇಶಕ ಎಂಎನ್ ಶಶಿಧರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
English summary :Basavaraj bommai