ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ | ಜನತಾ ನ್ಯೂಸ್
ಚೆನ್ನೈ : ಹಿರಿಯ ಅಧಿಕಾರಿಗಳನ್ನೊಳಗೊಂಡಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನವಾಗಿರುವ ಸುದ್ದಿ ತಿಳಿದುಬಂದಿದೆ.
ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಕುಟುಂಬದ ಸದಸ್ಯರು ಸೇರಿದಂತೆ ಅನೇಕರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕನೂರಿನಲ್ಲಿ ಪತನಗೊಂಡಿದೆ. ಇದರಲ್ಲಿ ಒಟ್ಟು 14 ಜನರು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಸಿಡಿಎಸ್ ಬಿಪಿನ್ ರಾವತ್ (Bipin Rawat) ಸೇರಿದಂತೆ 14 ಪ್ರಯಾಣಿಕರು ಹೆಲಿಕಾಪ್ಟರ್ನಲ್ಲಿದ್ದರು. ವೆಲ್ಲಿಂಗ್ಟನ್ನ ಸೇನಾ ಆಸ್ಪತ್ರೆಯಲ್ಲಿ ರಾವತ್ಗೆ ಅವರಿಗೆ ಚಿಕಿತ್ಸೆ ನೀಡುತ್ತಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ. ಮೃತಪಟ್ಟವರ ಗುರುತು ಪತ್ತೆಗಾಗಿ ವೈದ್ಯರು ಡಿಎನ್ಎ ಪರೀಕ್ಷೆ ಮಾಡುತ್ತಿದ್ದಾರೆ. ಸ್ಥಳೀಯ ಪೊಲೀಸರ ಬೆಂಬಲದೊಂದಿಗೆ ಸೇನಾ ಸಿಬ್ಬಂದಿ ಅಪಘಾತದ ಸ್ಥಳವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಬಿಪಿನ್ ರಾವತ್ ಸೇರಿ 14 ಮಂದಿ ಪ್ರಯಾಣಿಸುತ್ತಿದ್ದವರ ಪೈಕಿ 11 ಮಂದಿ ಮೃತಪಟ್ಟಿದ್ದು, ಬಿಪಿನ್ ರಾವತ್ ಸೇರಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡ ಬೆನ್ನಲ್ಲೇ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ನಿವಾಸಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದಾರೆ.