ತಿಮ್ಮಪ್ಪ ಮೂರು ತರಹ ಕಾಣುವ ರೀತಿ ರಮೇಶ್ ಜಾರಕಿಹೊಳಿ ಮಾತಾಡ್ತಾರೆ: ಸತೀಶ್ ಜಾರಕಿಹೊಳಿ | ಜನತಾ ನ್ಯೂಸ್
ಬೆಳಗಾವಿ : ತಿರುಪತಿ ತಿಮ್ಮಪ್ಪ ಮೂರು ತರಹ ಕಾಣುವ ರೀತಿಯಲ್ಲಿ ರಮೇಶ್ ಜಾರಕಿಹೊಳಿ ಸಹ ಮೂರು ತರಹ ಮಾತನಾಡುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸಿದ್ದರಾಮಯ್ಯರಿಗೆ ವೆಸ್ಟ್ ಬಾಡಿ ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ರಮೇಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರನ್ನು ಒಂದು ಸರಿ ಗುರು ಎಂದರೆ ಇನ್ನೊಮ್ಮೆ ಬೇರೆ ರೀತಿಯಾಗೆ ಮಾತನಾಡುತ್ತಾರೆ. ಹೀಗೆ ಜಾರಕಿಹೊಳಿ ಬೆಳಗ್ಗೆ ಒಂದು ರೀತಿ, ಸಂಜೆ ಒಂದು ರೀತಿ ಮಾತನಾಡುತ್ತಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿಯಲ್ಲಿ ಇದ್ದರೂ ಕೂಡ ಸಿದ್ದರಾಮಯ್ಯ ನಮ್ಮ ಗುರು ಅಂತಾರೆ. ಡಿ.ಕೆ ಶಿವಕುಮಾರ್ ಫ್ರೆಂಡ್ ಅಂತ ಹೇಳ್ತಾರೆ. ಈ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದರು.
ಬೆಳಗಾವಿ ಪರಿಷತ್ ಫಲಿತಾಂಶ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಜನ ನಮ್ಮ ಪರವಾಗಿದ್ದಾರೆ. 2 ಸ್ಥಾನದಲ್ಲಿ ಕಡಿಮೆ ಅಂತರದಿಂದ ಸೋತಿದ್ದೇವೆ. ಈ ಬಾರಿಯ ಚುನಾವಣೆ ನಮ್ಮ ಪರವಾಗಿದೆ. ನಮ್ಮ ಪರವಾಗಿದೆ ಎಂಬುದಕ್ಕೆ ಈ ಚುನಾವಣೆಯೇ ಸಾಕ್ಷಿ. ಬೆಳಗಾವಿ ಚುನಾವಣೆ ಹಾಗೂ ನಮಗೆ ಶಕ್ತಿ ಬಂದಿದೆ. ಈ ಚುನಾವಣೆ ವಿಧಾನ ಸಭೆಗೆ ಒಂದು ಮೆಟ್ಟಿಲು ಎಂದರು.