ಶೌರ್ಯ ಪ್ರಶಸ್ತಿ ಮೊತ್ತ 5 ಪಟ್ಟು ಹೆಚ್ಚಳ: ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಸಿಎಂ ಘೋಷಣೆ | ಜನತಾ ನ್ಯೂಸ್
ಬೆಳಗಾವಿ : ವಿಜಯ್ ದಿವಸ್ ಅಂಗವಾಗಿ ಮುಖ್ಯಮಂತ್ರಿ ಅವರು ಇಂದು ಬೆಳಗಾವಿಯ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ ನ ತರಬೇತಿ ಶಾಲೆಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಿ ಬೆಳಗಾವಿಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ನಗದು ಅನುದಾನದ ಮೊತ್ತದ ಬಗ್ಗೆ ಪರಿಷ್ಕರಣೆ ನಡೆಸಿದ ಸರ್ಕಾರ ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನವನ್ನು ಇದೀಗ ಐದು ಪಟ್ಟು ಹೆಚ್ಚಿಸಿದೆ.
ಮಹಾವೀರ ಚಕ್ರ 12 ಲಕ್ಷದಿಂದ 1 ಕೋಟಿ ರೂಪಾಯಿ,
ಅಶೋಕ ಚಕ್ರ 25 ಲಕ್ಷದಿಂದ 1.5 ಕೋಟಿ ರೂಪಾಯಿ,
ಕೀರ್ತಿ ಚಕ್ರ 12 ಲಕ್ಷದಿಂದ 1 ಕೋಟಿ ರೂಪಾಯಿ,
ವೀರ ಚಕ್ರ 8 ಲಕ್ಷದಿಂದ 50 ಲಕ್ಷ ರೂಪಾಯಿ,
ಶೌರ್ಯ ಚಕ್ರ 8 ಲಕ್ಷದಿಂದ 50 ಲಕ್ಷ ರೂಪಾಯಿ,
ಸೇನಾ ಮೆಡಲ್ 2 ಲಕ್ಷದಿಂದ 15 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಸಿಎಂ ಆದೇಶಿದ್ದಾರೆ.
ವಿಜಯ್ ದಿವಸ್ ಅಂಗವಾಗಿ ಮುಖ್ಯಮಂತ್ರಿ @BSBommai ಅವರು ಇಂದು ಬೆಳಗಾವಿಯ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ ನ ತರಬೇತಿ ಶಾಲೆಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
— CM of Karnataka (@CMofKarnataka) December 16, 2021
ಗೃಹ ಸಚಿವ @JnanendraAraga, ಮೇಜರ್ ಜನರಲ್ ಜೆ.ವಿ.ಪ್ರಸಾದ್ ಮತ್ತಿತರ ಗಣ್ಯರು ಭಾಗವಹಿಸಿದ್ದರು.#SwarnimVijayVarsh #VijayDiwas2021 #SwarnimVijayDiwas pic.twitter.com/KlwPrdvuJ4