ಭೋಪಾಲ್ ತಲುಪಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರ | ಜನತಾ ನ್ಯೂಸ್
ಬೆಂಗಳೂರು : ನಿನ್ನೆ ಬುಧವಾರ ಹುತಾತ್ಮರಾದ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಇಂದು ಗುರುವಾರ ಭೋಪಾಲ್ ವಿಮಾನ ನಿಲ್ದಾಣಕ್ಕೆ ತರಲಾಯಿತು. ನಾಳೆ ಭೋಪಾಲ್ ನಲ್ಲಿ ಅವರ ಅಂತಿಮ ವಿಧಿವಿಧಾನಗಳು ನೆರವೇರಲಿದೆ.
ಇದಕ್ಕೂ ಮೊದಲು, ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಲಾಯಿತು.
ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಡಿಸೆಂಬರ್ 8ರಂದು ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಜೀವಗಳನ್ನು ಬಲಿ ಪಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯಾಗಿದ್ದರು. ಅಪಘಾತದ ಬಳಿಕ ಮೊದಲು ಸಿಂಗ್ ಅವರನ್ನು ವೆಲ್ಲಿಂಗ್ಟನ್ನಲ್ಲಿರುವ ಮಿಲಿಟರಿ ಆಸ್ಪತ್ರೆಯಲ್ಲಿ ಜೀವ ಬೆಂಬಲದಲ್ಲಿಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ನಿನ್ನೆ ಕೊನೆಯುಸಿರೆಳೆದರು.
ಭಾರತೀಯ ವಾಯುಪಡೆಯ ಅಧಿಕಾರಿಗಳು ಮತ್ತು ಮಧ್ಯಪ್ರದೇಶದ ಸಚಿವರು ಭೋಪಾಲ್ ವಿಮಾನ ನಿಲ್ದಾಣದಲ್ಲಿ ಸಿಂಗ್ ಅವರಿಗೆ ಪುಷ್ಪಾಂಜಲಿ ಸಲ್ಲಿಸಿದರು.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಿಂಗ್ ಅವರ ಸಂಬಂಧಿಕರಿಗೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಸಂಸ್ಥೆಯೊಂದಕ್ಕೆ ಅವರ ಹೆಸರನ್ನಿಡುವುದು ಹಾಗೂ ಅವರ ಸ್ಮರಣಾರ್ಥ ಅವರ ಪ್ರತಿಮೆ ಸ್ಥಾಪಿಸುವ ಕುರಿತು ಕುಟುಂಬದವರೊಂದಿಗೆ ಚರ್ಚಿಸಲಾಗುವುದು.ರಾಜ್ಯ ಸರ್ಕಾರವು ಮುಂದಿನ ಬಂಧುಗಳಿಗೆ 1 ಕೋಟಿ ರೂ.ಪರಿಹಾರ ನೀಡಲಿದೆ ಎಂದರು.