ಬೆಳಗಾವಿಯಲ್ಲಿ ಪುಂಡಾಟ ನಡೆಸಿದವರ ದ್ರೋಹ, ಗೂಂಡಾ ಕಾಯ್ದೆ ದಾಖಲು | ಜನತಾ ನ್ಯೂಸ್
ಬೆಳಗಾವಿ : ಬೆಳಗಾವಿಯಲ್ಲಿ ಪುಂಡಾಟ ನಡೆಸಿದ್ದ ಪುಂಡರ ವಿರುದ್ದ ಗೂಂಡಾ ಕಾಯ್ದೆ ದಾಖಲು ಮಾಡಲಾಗಿದೆ ಅಂಥ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅಧಿವೇಶನದಲ್ಲಿ ಸಿಎಂ ಬೊಮ್ಮಾಯಿ ಅವರು ಖಂಡನಾ ನಿರ್ಣಯವನ್ನು ಮಂಡಿಸಿದ್ದು ಎಲ್ಲರೂ ಒಕ್ಕೊರಳಿನಿಂದ ಅಂಗೀಕರಿಸಿದ್ದಾರೆ. ನಂತರ ಮಾತನಾಡಿದ ಅವರು ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಶಿವಾಜಿ ಪ್ರತಿಮೆಗೆ ಅವಮಾನವನ್ನು ಸದನವು ಗಂಭೀರವಾಗಿ ಖಂಡಿಸುತ್ತದೆ.
ಪುಂಡರ ಹಣಿಯಲು ರಾಜ್ಯ ಸರ್ಕಾರದ ದಿಟ್ಟ ಕ್ರಮ, ಇಂಥ ಕೃತ್ಯಗಳನ್ನು ದೇಶದ್ರೋಹ ಎಂದು ಪರಿಗಣಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ಶಾಂತಿ ಕದಡುವ ಯತ್ನಿಸಿದವರ ವಿರುದ್ದ ಗುಂಡ ಕಾಯ್ದೆ, ದೇಶ ದ್ರೋಹ ಕಾಯ್ದೆಯನ್ನು ದಾಖಲು ಮಾಡಲಾಗಿದೆ ಎಂದು ಅವರು ಇದು ಹೇಳಿದರು.
ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನಿಷೇಧದ ಬಗ್ಗೆ ಹಲವರು ಸಲಹೆ ಮಾಡಿದ್ದಾರೆ. ಈ ಬಗ್ಗೆ ಕಾನೂನಾತ್ಮಕವಾಗಿ ಚಿಂತನೆ ನಡೆಸುತ್ತೇವೆ. ನಾವು ಕೈಗೊಂಡ ಕ್ರಮದ ಬಗ್ಗೆ ಕೇಂದ್ರದ ಗೃಹ ಇಲಾಖೆಗೂ ವರದಿ ಕಳಿಸ್ತೇವೆ. ಗಡಿಯಾಚೆಗಿನ ಇಂಥ ಕೃತ್ಯಗಳಿಗೂ ಕಡಿವಾಣ ಹಾಕಲು ಕ್ರಮ ಕೈಗೊಳ್ಳುತ್ತೇವೆ. ಗಡಿಭಾಗವನ್ನು ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಪ್ರಯತ್ನಿಸುತ್ತದೆ ಎಂದು ತಿಳಿಸಿದರು.
ಬೆಳಗಾವಿಯ ಸುವರ್ಣಸೌಧ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆ ಸ್ಥಾಪಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು.