ವಿಪಕ್ಷಗಳ ಗದ್ದಲದ ನಡುವೆ ಮತಾಂತರ ತಡೆ ವಿಧೇಯಕ ಅಂಗೀಕಾರ! | ಜನತಾ ನ್ಯೂಸ್
ಬೆಳಗಾವಿ : ವಿಪಕ್ಷಗಳ ತೀವ್ರ ವಿರೋಧದ ನಡುವೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ
ವಿಧಾನಸಭೆಯಲ್ಲಿ ಮಂಗಳವಾರ "ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣಾ ವಿಧೇಯಕ-2021" ಮಂಡನೆಯಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ನ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಅಂಗೀಕಾರ ಸಿಕ್ಕಿದೆ.
ಇಂದು ಸದನದಲ್ಲಿ ಸ್ಪೀಕರ್ ಕಾಗೇರಿ ಮಂತಾತರ ನಿಷೇಧ ಮಸೂದೆಯನ್ನು ದ್ವನಿ ಮತಕ್ಕೆ ಹಾಕಿದರು. ಈ ವೇಳೆ ವಿಧಾನಸಭಾ ಹೆಚ್ಚಿನ ಸದಸ್ಯರು ಮಸೂದೆ ಪರ ಮತ ಹಾಕಿದ್ದು, ಈಗ ಅಂಗೀಕಾರಗೊಂಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧೇಯಕ ಪಾಸ್ ಮಾಡಿಕೊಡಿ ಎಂದು ಮನವಿ ಮಾಡಿಕೊಂಡರು. ಆದರೆ ಕಾಂಗ್ರೆಸ್ ಸದನದಲ್ಲಿ ಗದ್ದಲ ನಡೆಸಿತು. ಕಾಂಗ್ರೆಸ್ ಸದಸ್ಯರ ಭಾರಿ ಗದ್ದಲದ ನಡುವೆಯೇ ಸ್ಪೀಕರ್ ಕಾಗೇರಿ ಅವರು ವಿಧೇಯಕ ಅಂಗೀಕಾರ ಪಡೆದಿದೆ ಎಂದು ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದರು.