ಜೆಡಿಎಸ್ ಮುಖಂಡನ ಪುತ್ರ ಆತ್ಮಹತ್ಯೆಗೆ ಶರಣು | ಜನತಾ ನ್ಯೂಸ್
ಮೈಸೂರು : ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡನ ಪುತ್ರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಪುತ್ರ ಪ್ರದೀಪ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಮರಟಿಕ್ಯಾತನಹಳ್ಳಿಯಲ್ಲಿ ನಡೆದಿದೆ.
ಇಲ್ಲಿನ ಅಪಾರ್ಟ್ ಮೆಂಟ್ ನಲ್ಲಿಯೇ ಪ್ರದೀಪ್ (32) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರದೀಪ್ ತಂದೆ ಬೆಳವಾಡಿ ಶಿವಮೂರ್ತಿ ಜಿಲ್ಲಾ ಜೆಡಿಎಸ್ ಖಜಾಂಚಿ ಆಗಿದ್ದು, ತಾಯಿ ಭಾಗ್ಯ ಶಿವಮೂರ್ತಿ ಮೈಸೂರು ಜಿಪಂ ಮಾಜಿ ಅಧ್ಯಕ್ಷರಾಗಿದ್ದಾರೆ.
ಆತ್ಮಹತ್ಯೆ ಹಿಂದೆ ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ. ಪ್ರದೀಪ್ ವಿವಾಹಿತನಾಗಿದ್ದು ಇವರಿಗೆ ಎರಡು ಮಕ್ಕಳಿದ್ದರು. ಆದರೆ, ಮೈಸೂರು ನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳಾ ಅವಿವಾಹಿತ ಸಬ್ಇನ್ಸ್ಪೆಕ್ಟರ್ವೊಬ್ಬರ ಪ್ರೇಮದ ಬಲೆಗೆ ಸಿಲುಕಿದ್ದರು ಎನ್ನಲಾಗಿದೆ.
ಆಕೆ ಮದುವೆಯಾಗುವಂತೆ ಪ್ರದೀಪನಿಗೆ ಒತ್ತಡ ಹೇರುತ್ತಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ತೋಟದಲ್ಲಿ ಕಂಠಪೂರ್ತಿ ಕುಡಿದು ಅಪಾರ್ಟ್ಮೆಂಟ್ಗೆ ಬಂದಿದ್ದ ಪ್ರದೀಪ್, ಪ್ರಿಯತಮೆಗೆ ವಿಡಿಯೋ ಕಾಲ್ ಮಾಡಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.