ವರ್ಷಪೂರ್ತಿ ದಿನಾ 15 ಗಂಟೆ ಕೆಲಸ ಮಾಡುವ ಸಂಕಲ್ಪ ಮಾಡಿದ್ದೇನೆ: ಬೊಮ್ಮಾಯಿ | ಜನತಾ ನ್ಯೂಸ್
ಹುಬ್ಬಳ್ಳಿ : ವರ್ಷಪೂರ್ತಿ ದಿನಾ 15 ಗಂಟೆ ಕೆಲಸ ಮಾಡುವ ಸಂಕಲ್ಪ ಮಾಡಿದ್ದೇನೆ. 2023ಕ್ಕೆ ಬಿಜೆಪಿ ಅಧಿಕಾರಕ್ಕೆ ತರುವುದೇ ನನ್ನ ಗುರಿ. ಈಗನಿಂದಲೇ ಅದನ್ನ ಆರಂಭಿಸಿದ್ದೇನೆ ಎಂದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಪಕ್ಷದ ಹಿರಿಯ ಮುಖಂಡರು ನನ್ನ ಮೇಲೆ ಬಹಳ ವಿಶ್ವಾಸ ಇಟ್ಟಿದ್ದಾರೆ, ಹೀಗಾಗಿ ಈಗಿನಿಂದಲೇ ಮುಂದಿನ ಚುನಾವಣೆ ಕಾರ್ಯ ಆರಂಭ ಮಾಡುತ್ತೇನೆ.
ಶಾಸಕ ಎಂ.ಪಿ.ಕುಮಾರಸ್ವಾಮಿಗೆ ನನ್ನ ಮೇಲೆ ಬಹಳ ಪ್ರೀತಿ ಇದೆ. ಅದಕ್ಕೆ ನನ್ನ ವಿಶ್ರಾಂತಿ ಬಗ್ಗೆ ಮಾತನಾಡಿದ್ದಾರೆ. ವರ್ಷಪೂರ್ತಿ ದಿನಾ 15 ಗಂಟೆ ಕೆಲಸ ಮಾಡುವ ಸಂಕಲ್ಪ ಮಾಡಿದ್ದೇನೆ. 2023ಕ್ಕೆ ಬಿಜೆಪಿ ಅಧಿಕಾರಕ್ಕೆ ತರುವುದೇ ನನ್ನ ಗುರಿ. ಈಗನಿಂದಲೇ ಅದನ್ನ ಆರಂಭಿಸಿದ್ದೇನೆ ಎಂದರು.
ನಾವು ನಮ್ಮದೇ ಆದ ತಂಡವಿದೆ. ನಾವೆಲ್ಲಾ ಸೇರಿ ಸಾಮೂಹಿಕವಾಗಿ ಚುನಾವಣೆ ಎದುರಿಸುತ್ತೇವೆ ಎಂದರು.