ಡಿಸೆಂಬರ್ 31ರ ಕರ್ನಾಟಕ ಬಂದ್ ಗೆ ನೀಡಿದ್ದ ಕರೆ ಯನ್ನು ಕನ್ನಡ ಪರ ಸಂಘಟನೆಗಳು ಹಿಂಪಡೆದಿವೆ - ಸಿಎಂ ಬೊಮ್ಮಾಯಿ | ಜನತಾ ನ್ಯೂಸ್
ಬೆಂಗಳೂರು : ಬಂದ್ ಕರೆಗೆ ಸಂಬಂಧಿಸಿದ ವಿವಿಧ ವಿಷಯಗಳ ಚರ್ಚೆಯ ನಂತರ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31 ರ ಕರ್ನಾಟಕ ಬಂದ್ಗೆ ನೀಡಿದ್ದ ಕರೆಯನ್ನು ಹಿಂಪಡೆದಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಂದ್ ಹಿಂಪಡೆಯುವ ಮುನ್ನ ಕನ್ನಡ ಒಕ್ಕೂಟದ ಮುಖಂಡ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಹಲವು ಕನ್ನಡಪರ ಸಂಘಟನೆಗಳ ಮುಖಂಡರು ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.
ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಒತ್ತಾಯಿಸಿ ಡಿಸೆಂಬರ್ 31 ರಂದು ಕರೆ ನೀಡಿದ್ದ ಕರ್ನಾಟಕ ಬಂದ್ ಅನ್ನು ಹಿಂತೆಗೆದುಕೊಂಡಿವೆ.
ಬೆಳಗಾವಿಯಲ್ಲಿ ಪದೇಪದೇ ಶಾಂತಿ ಕದಡುವ ಪ್ರಯತ್ನ ಮಾಡುತ್ತಲೇ ಇರುವ ಎಂಇಎಸ್, ಇತ್ತೀಚಿಗೆ ವಿಪರೀತವಾಗಿ ಪುಂಡಾಟಿಕೆ ಪ್ರದರ್ಶಿಸಿ ಕರ್ನಾಟಕ ಸರ್ಕಾರದ ವಾಹನಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದನ್ನು ಖಂಡಿಸಿ ಸಂಪೂರ್ಣ ಎಂಇಎಸ್ ನಿಷೇದವನ್ನು ಕನ್ನಡಪರ ಸಂಘಟನೆಗಳು ಕರೆ ನೀಡಿದ್ದವು.