ಧರ್ಮ ಸಂಸದ್ ನಲ್ಲಿ ದ್ವೇಷ ಭಾಷಣ ಪ್ರಕರಣ : 5 ಸದಸ್ಯರ ಎಸ್ಐಟಿ ರಚಿಸಿದ ಉತ್ತರಾಖಂಡ ಪೋಲಿಸ್ | ಜನತಾ ನ್ಯೂಸ್
ಹರಿದ್ವಾರ : ಧರ್ಮ ಸಂಸದ್ ನಲ್ಲಿ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂದಪಟ್ಟ ಹಾಗೆ ಪ್ರಕರಣದ ತನಿಖೆಗಾಗಿ ಎಸ್ಪಿ ಮಟ್ಟದ ಅಧಿಕಾರಿಯ ನೇತೃತ್ವದಲ್ಲಿ 5 ಸದಸ್ಯರ ವಿಶೇಷ ತನಿಖಾ ತಂಡವನ್ನು(ಎಸ್ಐಟಿ) ಉತ್ತರಾಖಂಡ ಪೋಲಿಸ ಇಲಾಖೆ ರಚಿಸಿದೆ.
ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ ದ್ವೇಷ ಭಾಷಣ ಪ್ರಕರಣದ ತನಿಖೆಗಾಗಿ ಎಸ್ಪಿ ಮಟ್ಟದ ಅಧಿಕಾರಿಯ ನೇತೃತ್ವದಲ್ಲಿ 5 ಸದಸ್ಯರ ಎಸ್ಐಟಿಯನ್ನು ರಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು, ಎಂದು ಡಿಐಜಿ ಗರ್ವಾಲ್ ಕರಣ್ ಸಿಂಗ್ ನಾಗ್ನ್ಯಾಲ್ ಹೇಳಿದ್ದಾರೆ.
ಧರ್ಮ ಸಂಸದ್ ದ್ವೇಷ ಭಾಷಣ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರನ್ನು ಹೆಸರಿಸಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಹರಿದ್ವಾರ ಪೋಲಿಸ್ ವರಿಷ್ಠಾಧಿಕಾರಿ ಸಿಟಿ ಶೇಖರ್ ಸುಯಲ್ ಶನಿವಾರ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಹೊಸದಾಗಿ, ಧರ್ಮ ದಾಸ್ ಮತ್ತು ಅನ್ನಪೂರ್ಣ ಅವರ ಹೆಸರನ್ನು ದಾಖಲಿಸಲಾಗಿದೆ.
ಡಿಸೆಂಬರ್ 23 ರಂದು, ಈ ಪ್ರಕರಣದಲ್ಲಿ ವಾಸಿಂ ರಿಜ್ವಿ ಅಂದರೆ ಜಿತೇಂದ್ರ ತ್ಯಾಗಿ ಮತ್ತು ಇತರರ ವಿರುದ್ಧ ಸೆಕ್ಷನ್ 153A ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಎಂದು ಪೊಲೀಸರು ತಿಳಿಸಿದ್ದಾರೆ.
ವೈರಲ್ ವೀಡಿಯೊ ಕ್ಲಿಪ್ ಆಧಾರದ ಮೇಲೆ, ಹೆಚ್ಚಿನ ತನಿಖೆಯ ನಂತರ, ಧರ್ಮ ಸಂಸದ್ ದ್ವೇಷ ಭಾಷಣ ಪ್ರಕರಣದಲ್ಲಿ ಇನ್ನೂ ಇಬ್ಬರ ಹೆಸರುಗಳು, ಸಾಗರ್ ಸಿಂಧು ಮಹಾರಾಜ್ ಮತ್ತು ಯತಿ ನರಸಿಂಹಾನಂದ ಗಿರಿ ಅವರನ್ನು ಎಫ್ಐಆರ್ಗೆ ಸೇರಿಸಲಾಗಿದೆ. ಎಫ್ಐಆರ್ನಲ್ಲಿ ಸೆಕ್ಷನ್ 295 ಎ ಸೇರಿಸಲಾಗಿದೆ ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್