ಸೆಕ್ಯುಲರ್ ಹೆಸರಿನಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆ ಮಾಡುವುದನ್ನು ನಾವು ಸಹಿಸೋದಿಲ್ಲ | ಜನತಾ ನ್ಯೂಸ್
ಬೆಂಗಳೂರು : ಸೆಕ್ಯುಲರ್ ಹೆಸರಿನಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆ ಮಾಡುವುದನ್ನು ನಾವು ಸಹಿಸೋದಿಲ್ಲ. ಕುಂಬಳಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು ಎಂದು ಬಿಜೆಪಿ ನಾಯಕ ಸಿಟಿ ರವಿ ಪ್ರಶ್ನಿಸಿದ್ದಾರೆ.
ದೇವಾಲಯಗಳನ್ನು ಸ್ವಾತಂತ್ರ್ಯಗೊಳಿಸಿದರೆ ಸುಟ್ಟು ಭಸ್ಮವಾಗುತ್ತಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಡಿ.ಕೆ.ಶಿವಕುಮಾರ್ ವಸಿಷ್ಠರು ಅಲ್ಲ, ವಿಶ್ವಾಮಿತ್ರನೂ ಅಲ್ಲ. ಅವರೇನಾದರೂ ತಮ್ಮನ್ನು ಭಸ್ಮಾಸುರ ಅಂತ ಅಂದುಕೊಂಡಿದ್ದರೆ, ಹೇಗೆ ಕಾಂಗ್ರೆಸ್ನವರ ತಲೆ ಮೇಲೆಯೇ ಕೈ ಇಡಿಸಬೇಕು ಎನ್ನುವುದು ನಮಗೆ ಗೊತ್ತಿದೆ. ಅವರೇ ಶಾಪಗ್ರಸ್ಥರು, ಬೇಲ್ ಮೇಲೆ ಹೊರಬಂದಿದ್ದಾರೆ. ಬೇಲ್ ಕ್ಯಾನ್ಸಲ್ ಆದರೆ ಜೈಲಿಗೆ ಹೋಗಬೇಕು.
ಬ್ರಿಟಿಷರು ದೇಗುಲದ ಮೇಲಿನ ಪ್ರೀತಿಯಿಂದ ನಿಯಂತ್ರಕ್ಕೆ ತರಲಿಲ್ಲ. ದೇಗುಲದ ಆದಾಯದ ಮೇಲೆ ಕಟ್ಟಿಟ್ಟು ಹಿಡಿತಕ್ಕೆ ತೆಗೆದುಕೊಂಡರು. ದೇವಸ್ಥಾನಗಳ ಹಿಡಿತ ಸ್ವಾತಂತ್ರ್ಯ ನೈಜ ಅರ್ಥಕ್ಕೆ ಸೂಕ್ತವಲ್ಲ. ಕೆಪಿಸಿಸಿ ಅಧ್ಯಕ್ಷರು ಭಸ್ಮ ಆಗ್ತೀರಿ ಎಂದು ಟೀಕೆ ಮಾಡಿದರು.
ಕಾಂಗ್ರೆಸ್ನಲ್ಲಿ ಯಾರು ಸುಪ್ರಿಂ? ವಿಪಕ್ಷ ನಾಯಕ ಸುಪ್ರೀಮೋ, ಪಾರ್ಟಿ ಅಧ್ಯಕ್ಷ ಸುಪ್ರಿಮೋ. ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಸಿದ್ದರಾಮಯ್ಯ ಏ ಅಧ್ಯಕ್ಷ ನನ್ನ ಬಿಟ್ಟು ಮೀಟಿಂಗ್ ಮಾಡಬೇಡ ಅಂತಾರೆ. ಪಾರ್ಟಿ ಅಧ್ಯಕ್ಷರಿಗೆ ಒಂದು ಮೀಟಿಂಗ್ ಮಾಡುವ ಅವಕಾಶವೂ ಇಲ್ವಾ? ಎಂದು ಕುಟುಕಿದರು.
ಸುಳ್ಳು ಹೇಳಿಕೊಂಡು ಪಾದಯಾತ್ರೆ ಮಾಡಬೇಡಿ. ಆರೋಗ್ಯ ಸುಧಾರಣೆಗೆ ಬೇಕಾದ್ರೆ ಪಾದಯಾತ್ರೆ ಮಾಡಿ. ಮೇಕೆದಾಟು ಯೋಜನೆಗೆ ಕೇಂದ್ರ ತಾತ್ವಿಕ ಒಪ್ಪಿಗೆ ಕೊಟ್ಟಿದೆ. ಈಗ ಕಾಂಗ್ರೆಸ್ ಪಕ್ಷ ಯಾರ ವಿರುದ್ಧ ಪಾದಯಾತ್ರೆ ಮಾಡ್ತಿದೆ? ಯಾವ ಉದ್ದೇಶ ಇಟ್ಟುಕೊಂಡು ಪಾದಯಾತ್ರೆ ಮಾಡುತ್ತಿದ್ದಾರೆ? ಅಂತ ಕಾಂಗ್ರೆಸ್ ನಾಯಕರಿಗೆ ಸಿಟಿ ರವಿ ಪ್ರಶ್ನಿಸಿದ್ದಾರೆ.
ಬಿಜೆಪಿ ತರುವ ಎಲ್ಲ ಪರಿವರ್ತನೆಗಳನ್ನು ವಿರೋಧಿಸುವ ಕಾಂಗ್ರೆಸ್ ಚಾಳಿ ಅಪಾಯಕಾರಿಯಾದದ್ದು, ಪೌರತ್ವ ವಿಧೇಯಕವನ್ನು ಕಾಂಗ್ರೆಸ್ ವಿರೋಧಿಸಿತು. ಆರ್ಟಿಕಲ್ 370 ರದ್ದತಿಗೂ ಕಾಂಗ್ರೆಸ್ ವಿರೋಧಿಸಿತ್ತು. ಹೊಸ ಶಿಕ್ಷಣ ನೀತಿಯನ್ನು ಕೂಡ ವಿರೋಧಿಸಿತ್ತು. ಕಾಲಕ್ಕೆ ತಕ್ಕಂತೆ ಬದಲಾಗಬೇಕೆಂಬ ಮನಸ್ಥಿತಿ ಕಾಂಗ್ರೆಸ್ಗೆ ಇಲ್ಲ. ಅದಕ್ಕೆ ಒಂದು ಕುಟುಂಬಕ್ಕೆ ಜೋತು ಬಿದ್ದಿದೆ ಎಂದು ಕಿಡಿಕಾರಿದ್ದಾರೆ.