ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಕಾಮುಕರಿಂದ ಗ್ಯಾಂಗ್ ರೇಪ್, ಸಂತ್ರಸ್ತೆ ಸ್ಥಿತಿ ಗಂಭೀರ | ಜನತಾ ನ್ಯೂಸ್
ದಾವಣಗೆರೆ : ಮಹಿಳೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿ ವಿಕೃತಿ ಮೆರೆದಿರುವ ಘಟನೆ ತಡವಾಗಿ ದಾವಣಗೆರೆ ತಾಲೂಕಿನ ಮ್ಯಾಸರಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.
ತೊಗರಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ಮಹಿಳೆಗೆ ಮತ್ತು ಬರುವ ಪದಾರ್ಥ ನೀಡಿದ ಕಾಮುಕರು, ಆಕೆ ಮೇಲೆ ಅತ್ಯಾಚಾರವೆಸಗಿದ್ದಾರೆ.
ಮ್ಯಾಸರಹಳ್ಳಿ ಗ್ರಾಮದ ಹೊರವಲಯದಲ್ಲಿ ಮಹಿಳೆಯು ತೊಗರಿ ಹಾಕಿದ್ದರು. ಆ ವೇಳೆಗೆ ಅಲ್ಲಿಗೆ ಬಂದ ಕಿರಣ್ ಹಾಗೂ ಪ್ರಭು ಮಹಿಳೆಯನ್ನು ಹೆದರಿಸಿ ಜಮೀನಿಗೆ ಕರೆದುಕೊಂಡು ಹೋಗಿದ್ದಾರೆ. ನಂತರ ಬಲವಂತವಾಗಿ ಮತ್ತು ಬರುವ ಪದಾರ್ಥ ನೀಡಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಮಹಿಳೆಯ ಕೂಗಾಟ ಕೇಳಿದ ಸಂಬಂಧಿಯೊಬ್ಬರು ಸ್ಥಳಕ್ಕೆ ಆಗಮಿಸಿದ್ದಾರೆ. ಅಷ್ಟರಲ್ಲಿ ಆರೋಪಿಗಳು ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ. ಅಲ್ಲದೆ ಜಮೀನಿನಲ್ಲಿ ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಇದನ್ನು ನೋಡಿದ ಮಹಿಳೆಯ ಸಂಬಂಧಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮ್ಯಾಸರಹಳ್ಳಿವ ಪ್ರಭು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮತ್ತೊಬ್ಬ ಆರೋಪಿ ಕುಂದುವಾಡದ ಕಿರಣ್ ತಲೆ ಮರೆಸಿಕೊಂಡಿದ್ದು, ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.