ರಾಜ್ಯಾದ್ಯಂತ ಇಂದು ರಾತ್ರಿ 8 ಗಂಟೆಯಿಂದ ಮದ್ಯ ಮಾರಾಟ ಸಂಪೂರ್ಣ ಬಂದ್ | ಜನತಾ ನ್ಯೂಸ್
ಬೆಂಗಳೂರು : ಕೊರೊನಾವೈರಸ್ ನಿಯಂತ್ರಿಸುವ ಹಿನ್ನೆಲೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ಲಾಕ್ ಡೌನ್ ಹಿನ್ನೆಲೆ ಇಂದು ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗಿನವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೊನಾ ಹಾಗೂ ಓಮಿಕ್ರಾನ್ ಸೋಂಕು ಹಾವಳಿ ಹೆಚ್ಚಾಗುತ್ತಿದ್ದು, ಇಂದು ರಾತ್ರಿ 8 ಗಂಟೆಯಿಂದ ವಾರಾಂತ್ಯ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಇರಲಿದೆ.
ರಾಜ್ಯದಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಘೋಷಿಸಿರುವ ವಾರಾಂತ್ಯದ ಕರ್ಫ್ಯೂ ಭಾಗವಾಗಿ, ಶುಕ್ರವಾರ ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಾಗಿ ಎಲ್ಲ ಮದ್ಯ ಮಾರಾಟ ಮಳಿಗೆ, ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರು ಸಹಕರಿಸಬೇಕು ಎಂದು ಮನವಿ ಮಾಡಿದರು..