ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ | ಜನತಾ ನ್ಯೂಸ್
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಬಂದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಸಿಎಂಗೆ ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿ ಕರೆ ಮಾಡಿ, ಸುಮಾರು ಐದು ನಿಮಿಷ ಮಾತುಕತೆ ನಡೆಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಕುಟುಂಬ ಸದಸ್ಯರಿಗೂ ಸೋಂಕು ತಗುಲಿದ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ. ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಪ್ರಧಾನಿ ಸಲಹೆ ಕೊಟ್ಟಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿಗೆ ಮಾಹಿತಿ ನೀಡಿದ ಸಿಎಂ, ಈಗ ಬೆಂಗಳೂರಿನಲ್ಲಿ ವರ್ಚುವಲ್ ಆಗಿ ಸಭೆ ನಡೆಸುತ್ತಿದ್ದೇನೆ. ಜನವರಿ 13 ರಂದು ಸಂಜೆ ತಾವು ಕರೆದಿರುವ ಕೊವಿಡ್ ವರ್ಚುಯಲ್ ಸಭೆಗೆ ಪೂರ್ವಭಾವಿ ರೂಪದಲ್ಲಿ ಈ ಸಭೆ ನಡೆಸುತ್ತಿದ್ದೇನೆ. ರಾಜ್ಯದಲ್ಲಿ ಕೊವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದೆ. ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ತಿಳಿಸಿದ್ದಾರೆ.