ಮೇಕೆದಾಟು ಪಾದಯಾತ್ರೆ : ರಾಜ್ಯ ಸರ್ಕಾರಕ್ಕೆ ವಾಗ್ದಂಡನೆ, ಕೆಪಿಸಿಸಿಗೆ ಶೋಕಾಸ್ ನೋಟಿಸ್ ನೀಡಿದ ಹೈಕೋರ್ಟ್ | ಜನತಾ ನ್ಯೂಸ್
ಬೆಂಗಳೂರು : ದಿನೇದಿನೇ ವಿಪರೀತವಾಗಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ನಡುವೆ ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ಮುಂದುವರೆಸಿದೆ. ಪಾದಯಾತ್ರೆಯ ಸಂದರ್ಭದಲ್ಲಿ ಕೋವಿಡ್ ನಿಯಮಗಳ ಉಲ್ಲಂಘನೆಯ ವಿಷಯದಲ್ಲಿ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ(ಪಿಐಎಲ್)ಯನ್ನು ಕರ್ನಾಟಕ ಹೈಕೋರ್ಟ್ ಕೈಗೆತ್ತಿಕೊಂಡಿದೆ.
ಪ್ರಕರಣದ ಕುರಿತು, ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆಯ ಸಂದರ್ಭದಲ್ಲಿ ಕೋವಿಡ್ ನಿಯಮಗಳ ಉಲ್ಲಂಘನೆಯ ವಿಷಯದಲ್ಲಿ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರಕ್ಕೆ ವಾಗ್ದಂಡನೆ ಮಾಡಿದ ಮಾನ್ಯ ಹೈಕೋರ್ಟ್; ಪಾದಯಾತ್ರೆಗೆ ಸರ್ಕಾರ ಏಕೆ ಅನುಮತಿ ನೀಡಿದೆ, ಎಂದು ಪ್ರಶ್ನಿಸಿದೆ.
ಈ ಸಂಬಂಧ ಕಾಂಗ್ರೆಸ್ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ನ್ಯಾಯಾಲಯ ಶೋಕಾಸ್ ನೋಟಿಸ್ ಕೂಡ ಜಾರಿಗೊಳಿಸಿದೆ, ಎಂದು ಎಏನ್ಐ ಟ್ವೀಟ್ ಮಾಡಿದೆ.