ಬೂಸ್ಟರ್ ಡೋಸ್ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್! | ಜನತಾ ನ್ಯೂಸ್
ಬೆಂಗಳೂರು : ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೂಸ್ಟರ್ ಡೋಸ್ ಪಡೆದುಕೊಂಡರು. ವಿಕ್ಟೋರಿಯಾ ಆಸ್ಪತ್ರೆ ಮುಖ್ಯಸ್ಥರು ಈ ವೇಳೆ ಉಪಸ್ಥಿತರಿದ್ದರು. ಈ ವೇಳೆ, ರಾಜ್ಯಪಾಲರಿಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸಾಥ್ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲರು, ಕೊವಿಡ್ ಮಹಾಮಾರಿಯಿಂದ ಪಾರಾಗಲು ಲಸಿಕೆಯ ಅವಶ್ಯಕತೆ ಇದೆ. ರಾಜ್ಯದ ಜನ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಬೇಕು ಎಂದು ಕರೆ ನೀಡಿದ್ದಾರೆ.
ದೆಹಲಿಯಲ್ಲಿ ಕೋವಿಡ್ ಲಸಿಕೆಯ ಎರಡು ಡೋಸ್ಗಳನ್ನೂ ಪಡೆದಿದ್ದೇನೆ. ಇಂದು ಬೂಸ್ಡರ್ ಡೋಸ್ ಪಡೆದಿದ್ದೇನೆ. ಪ್ರಮಾಣ ಪತ್ರವನ್ನು ನನಗೆ ನೀಡಿದ್ದಾರೆ. ಯಾರ್ಯಾರು ಬೂಸ್ಟರ್ ಡೋಸ್ ಪಡೆಯಲು ಅರ್ಹರು ಇದ್ದೀರೋ ಅವರೆಲ್ಲ ಲಸಿಕೆ ಪಡೆಯಿರಿ. ಯಾರೂ ಮೊದಲನೆ, ಎರಡನೆಯ ಲಸಿಕೆ ಪಡೆದಿಲ್ಲವೋ ಅವರು ಲಸಿಕೆ ಕಡ್ಡಾಯ ಹಾಕಿಸಿಕೊಳ್ಳಿ. ದೇಶಕ್ಕೆ ಹೋಲಿಸಿದಲ್ಲಿ ಲಸಿಕೆ ವಿಚಾರದಲ್ಲಿ ಕರ್ನಾಟಕ ಮುಂದಿದೆ. ಇದಕ್ಕೆ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ರಾಜ್ಯಪಾಲರು ಹೇಳಿದರು.
ಇಂದು ಮಕರ ಸಂಕ್ರಮಣ ಹಬ್ಬದ ಹಿನ್ನೆಲೆ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ಕೋರಿದರು.