3 ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚಿಸಲು ನಾಳೆ ತುರ್ತು ಸಭೆ - ಸಚಿವ ಡಾ.ಸುಧಾಕರ್ | ಜನತಾ ನ್ಯೂಸ್
ಬೆಂಗಳೂರು : ಬೆಳಗಾವಿಯಲ್ಲಿ ರೂಬೆಲ್ಲಾ ಚುಚ್ಚುಮದ್ದಿನಿಂದ ಮೂರು ಶಿಶುಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚಿಸಲು ನಾಳೆ ತುರ್ತು ಸಭೆ ಕರೆಯಲಾಗಿದೆ, ಎಂದು ಅರೋಗ್ಯ ಮಂತ್ರಿ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.
ಈ ದುರ್ಘಟನೆಯ ಕುರಿತು ಇಂದು ಮಾತನಾಡಿದ ಅವರು, ಸಾವಿಗೆ ಸೆಪ್ಟಿಕ್ ಶಾಕ್ ಸಿಂಡ್ರೋಮ್ ಎಂದು ಹೇಳುವ ವರದಿಯನ್ನು ನಾನು ಸ್ವೀಕರಿಸಿದ್ದೇನೆ. ಆದರೆ ಲಸಿಕೆ ಸಂಗ್ರಹಣೆ ಮತ್ತು ನಿರ್ವಹಣೆಯ ಕೋಲ್ಡ್ ಚೈನ್ ನಿರ್ವಹಣೆಯಲ್ಲಿ ವಿಫಲವಾಗಿದೆಯೇ ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ, ಎಂದು ದಡಾರ-ರುಬೆಲ್ಲಾ ಲಸಿಕೆ ಪಡೆದ ನಂತರ ಬೆಳಗಾವಿಯಲ್ಲಿ ಸಾವನ್ನಪ್ಪಿದ 3 ಶಿಶುಗಳ ಕುರಿತು ಪ್ರಶ್ನೆಗೆ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಎಏನ್ಐಗೆ ತಿಳಿಸಿದ್ದಾರೆ.
ಜವಾಬ್ದಾರಿಯುತ ಅಧಿಕಾರಿಗಳನ್ನು ಇಲಾಖಾ ವಿಚಾರಣೆಗಾಗಿ ಅಮಾನತುಗೊಳಿಸಲಾಗುವುದು. ಲಸಿಕೆ ರಚನೆಯಲ್ಲಿಯೂ ಏನಾದರೂ ಸಮಸ್ಯೆಯಿದೆಯೇ ಎಂದು ನಾವು ತನಿಖೆ ನಡೆಸುತ್ತಿದ್ದೇವೆ. ಈ ಕುರಿತು ಚರ್ಚಿಸಲು ನಾಳೆ ತುರ್ತು ಸಭೆ ಕರೆಯಲಾಗಿದೆ, ಎಂದು ಸಚಿವರು ತಿಳಿಸಿದ್ದಾರೆ.