ರಸ್ತೆ ಅಪಘಾತ: ಯಕ್ಷಗಾನ ಕಲಾವಿದ ಸ್ಥಳದಲ್ಲೇ ಸಾವು | ಜನತಾ ನ್ಯೂಸ್
ಮಂಗಳೂರು : ಬೆಳ್ಳಂಬೆಳಗ್ಗೆ ನಡೆದ ರಸ್ತೆ ಅಪಘಾತವೊಂದರಲ್ಲಿ ಯಕ್ಷಗಾನ ಮುಗಿಸಿ ಮನೆಗೆ ತೆರಳುತ್ತಿದ್ದ ಕಲಾವಿದರೋರ್ವರು ಮೃತಪಟ್ಟ ಘಟನೆ ನಡೆದಿದೆ.
ಪುರಸಭೆ ವ್ಯಾಪ್ತಿಯ ಗಂಟಾಲ್ಕಕಟ್ಟೆಯಲ್ಲಿ ಕಾರು- ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗ್ಗೆ ಸಂಭವಿಸಿದೆ. ಕುಂದಾಪುರ ಹಿರಿಯಡ್ಕ ಮೇಳದ ಹಿರಿಯ ಕಲಾವಿದ ವೇಣೂರು ವಾಮನ ಕುಮಾರ್(46 ವ) ಎಂದು ಗುರುತಿಸಲಾಗಿದೆ.
ಬಡಗು ತಿಟ್ಟಿನ ಯಕ್ಷಗಾನ ಮೇಳದಲ್ಲಿ ಹಾಗೂ ಚಿಕ್ಕಮೇಳದಲ್ಲಿ ಯಕ್ಷ ಕಲಾವಿದರಾಗಿದ್ದರು. ಕುಂದಾಪುರದ ಕೊಂಕಿ ಎಂಬಲ್ಲಿ ಯಕ್ಷಗಾನ ಮುಗಿಸಿ ಬೈಕ್ನಲ್ಲಿ ಬರುವಾಗ ಒಮ್ನಿ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟರು ಎಂದು ವರದಿಯಾಗಿದೆ.
RELATED TOPICS:
English summary :Accident in Mangalore