ನಾನು ಸೋತಿದ್ದೇನೆ, ಅವರಪ್ಪ ಸೋತಿಲ್ವಾ, ಮಗ ಸೋತಿಲ್ವಾ, ಅಣ್ಣ ಸೋತಿಲ್ವಾ? | ಜನತಾ ನ್ಯೂಸ್
ಬೆಂಗಳೂರು : ಹೆಚ್ ಡಿ ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ಗೆ ತಿರುಗೇಟು ನೀಡಿರುವ ಮಾಜಿ ಸಿದ್ದರಾಮಯ್ಯ ಅವರು ಹೆಚ್ಡಿಕೆ ಭಾಷೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದಿದ್ದಾರೆ.
ಚುನಾವಣೆಯಲ್ಲಿ ಸೋಲು-ಗೆಲುವನ್ನು ನಿರ್ಧಾರ ಮಾಡುವುದು ಮತದಾರರು. ಮತದಾರರು ಕೊಟ್ಟ ತೀರ್ಪನ್ನು ನಾವು ಸ್ವೀಕಾರ ಮಾಡಬೇಕು. ನಾನು ಸೋತಿದ್ದೇನೆ. ಅವರ ಅಪ್ಪ ಸೋತಿಲ್ವಾ? ಮಗ ಸೋತಿಲ್ವಾ? ಅಣ್ಣ ಸೋತಿಲ್ವಾ? ಎಂದು ಕಿಡಿಕಾರಿದ ಅವರು, ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪು ಅಂತಿಮ. ನಾನು ಜೆಡಿಎಸ್ನಲ್ಲಿ ರಾಜ್ಯಾಧ್ಯಕ್ಷ ಆಗಿದ್ದಾಗ ಈ ಕುಮಾರಸ್ವಾಮಿ ಎಲ್ಲಿದ್ದರೂ ಎನ್ನುವುದೇ ಗೊತ್ತಿಲ್ಲ. ನಾನೇಕೆ ಇವರ ಮುಂದೆ ಹೋಗಿ ಕೈ ಕಟ್ಟಿ ನಿಲ್ಲಲಿ. ಕಣ್ಣೀರು ಹಾಕಲಿ ಎಂದು ಪ್ರಶ್ನಿಸಿದರು.
ನಾನು ರಾಜ್ಯಾಧ್ಯಕ್ಷ ಆಗಿದ್ದಾಗ ಈ ಕುಮಾರಸ್ವಾಮಿ ಎಲ್ಲಿದ್ರು ಅಂತಾನೇ ಗೊತ್ತಿಲ್ಲ. ನಾನೇಕೆ ಇವರ ಮುಂದೆ ಹೋಗಿ ಕೈಕಟ್ಟಿ ನಿಲ್ಲಲಿ, ಕಣ್ಣೀರು ಹಾಕಲಿ ಎಂದು ಟಾಂಗ್ ಕೊಟ್ಟರು. ಈಗ ರಾಜ್ಯದ ಜನರ ಮುಂದೆ ಕಣ್ಣೀರು ಹಾಕುತ್ತಿರುವುದು ಯಾರೆಂದು ಗೊತ್ತಿದೆ. ನಾನೇಕೆ ಕಣ್ಣೀರು ಹಾಕಲಿ. ಇವರ ಭಾಷೆ ಇವರ ರಾಜಕೀಯ ಸಂಸ್ಕೃತಿಯನ್ನು ತೋರಿಸುತ್ತದೆ ಎಂದರು.