ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವದ ಸಂಭ್ರಮ! | ಜನತಾ ನ್ಯೂಸ್
ಬೆಂಗಳೂರು : ಗಣರಾಜ್ಯೋತ್ಸವ ದಿನಾಚರಣೆಯನ್ನು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿ, ಭಾಷಣ ಮಾಡಿದರು.
ರಾಜ್ಯದ ಜನತೆಗೆ 73ನೇ ಗಣರಾಜ್ಯೋತ್ಸವ ಶುಭಾಶಯ ಕೋರಿದ ಅವರು, ಕೋವಿಡ್ ಪರಿಣಾಮವನ್ನು ತಗ್ಗಿಸಲು ಹಗಿರುಳು ಸರ್ಕಾರ ಶ್ರಮಿಸಿದೆ. ಜನತೆಯ ಸಹಕಾರದೊಂದಿಗೆ ಕೋವಿಡ್ ಪರಿಣಾಮವನ್ನು ಪರಿಣಾಮಕಾರಿಯಾಗಿ ತಗ್ಗಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.
ನಮ್ಮ ಸರ್ಕಾರವು, ಕೋವಿಡ್-19ರ ಪರಿಣಾಮವನ್ನು ತಗ್ಗಿಸಲು ಹಗಲಿರುಳು ಶ್ರಮಿಸಿದೆ ಮತ್ತು ಜನತೆಯ ಸಹಕಾರದೊಂದಿಗೆ ನಾವು ಕೋವಿಡ್ ಪರಿಣಾಮವನ್ನು ಪರಿಣಾಮಕಾರಿಯಾಗಿ ತಗ್ಗಿಸುವಲ್ಲಿ ಯಶಸ್ವಿಯಾಗಿದ್ದೇವೆ. ಈ ಬಿಕ್ಕಟ್ಟನ್ನು ನಮ್ಮ ಸಾಮರ್ಥ್ಯ ವೃದ್ಧಿಸುವ ಮತ್ತು ಹೆಚ್ಚುವರಿ ಆರೋಗ್ಯ ಮೂಲ ಸೌಕರ್ಯವನ್ನು ಸೃಜಿಸುವ ಹಾಗೂ ಆಕ್ಸಿಜನ್ ಸಿಲಿಂಡರ್ಗಳು ಮತ್ತು ವೆಂಟಿಲೆಟರ್ಗಳ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಒಂದು ಅವಕಾಶವನ್ನಾಗಿ ನಾವು ಬಳಸಿಕೊಂಡಿದ್ದೇವೆ, ಎಂದು ತಿಳಿಸಿದರು.
ಭಾರತವು ಎರಡು ಲಸಿಕೆಗಳನ್ನು ಉತ್ಪಾದಿಸಿರುವುದಲ್ಲದೆ ಈ ಲಸಿಕೆಯನ್ನು ಇತರ ದೇಶಗಳಿಗೂ ರಫ್ತು ಮಾಡುವಲ್ಲಿ ಯಶಸ್ವಿಯಾಗಿದೆ. ಲಸಿಕೆ ಹಂತ ಹಂತವಾಗಿ ಪ್ರತಿಯೊಬ್ಬರಿಗೆ ತಲುಪುವಂತೆ ನೋಡಿಕೊಳ್ಳಲು ನಾವು ಕೇಂದ್ರದೊಂದಿಗೆ ನಿಕಟ ಸಹಯೋಗದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಉಲ್ಲೇಖಿಸಿದರು. ಇದೇ ಸಂದರ್ಭದಲ್ಲಿ ಕೋವಿಡ್ ಸಂದರ್ಭದಲ್ಲಿ ಶ್ರಮಿಸಿದ ವೈದ್ಯರಿಗೆ, ನರ್ಸ್ಗಳಿಗೆ, ಪೊಲೀಸ್ ಸಿಬ್ಬಂದಿಗೆ ಹಾಗೂ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.