ಸಿ.ಎಂ.ಇಬ್ರಾಹೀಂ ಜೆಡಿಎಸ್ ಗೆ ಬಂದರೆ ಸ್ವಾಗತ, ಗೌರವದ ಸ್ಥಾನ ಮಾನ ಕೊಡುತ್ತೇವೆ! | ಜನತಾ ನ್ಯೂಸ್
ಬೆಂಗಳೂರು : ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಪಕ್ಷಕ್ಕೆ ಬಂದರೆ ಸ್ವಾಗತ. ಇಬ್ರಾಹಿಂ ಬಂದರೆ ಗೌರವದ ಸ್ಥಾನ ಮಾನ ಕೊಡುತ್ತೇವೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಇಬ್ರಾಹಿಂ ಅವರಿಗೆ ಬಹಿರಂಗ ಆಹ್ವಾನ ಕೊಟ್ಟಿದ್ದಾರೆ.
ಇಬ್ರಾಹಿಂ ಅವರು ರಾಜಕೀಯದಲ್ಲಿ ಹಿರಿಯ ನಾಯಕರಾಗಿದ್ದಾರೆ. ಅವರಿಗೆ ದೇವೇಗೌಡರ ಬಗ್ಗೆ, ಜೆಡಿಎಸ್ ಬಗ್ಗೆ ಪ್ರೀತಿ ಇದೆ. ಈ ಜಾತ್ಯತೀತ ಪಕ್ಷ ಉಳಿಯಬೇಕೆಂದು ಅವರು ಬಯಸುತ್ತಾರೆ. ಆದ್ದರಿಂದ ಅವರು ಪಕ್ಷಕ್ಕೆ ಬರುವುದಾದರೆ ಮುಕ್ತ ಆಹ್ವಾನವಿದೆ. ನಾವು ಕದ್ದು ಮುಚ್ಚಿ ಯಾವುದನ್ನೂ ಮಾಡಿಲ್ಲ, ಇಬ್ರಾಹಿಂ ಬಂದರೆ ಗೌರವದ ಸ್ಥಾನ ಮಾನ ಕೊಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಾನು ಇಬ್ರಾಹಿಂ ಅವರಿಗೂ ಕರೆ ಮಾಡಿ ಮಾತನಾಡಿದ್ದೇನೆ ಎಂದು ಹೆಚ್ಡಿಕೆ ಹೇಳಿದ್ದಾರೆ.
RELATED TOPICS:
English summary :HD Kumaraswamy: When CM Ibrahim joins the JDS, we give him respect