ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಆದ್ಯತೆ ದೊರೆತಿದೆ: ಡಾ. ಕೆ.ಸುಧಾಕರ್ | ಜನತಾ ನ್ಯೂಸ್
ಬೆಂಗಳೂರು : ಧಾನಿ ನರೇಂದ್ರ ಮೋದಿ ಸರ್ಕಾರ ಇಂದು ಮಂಡನೆ ಮಾಡಿರುವ ಬಜೆಟ್, ಕೋವಿಡ್ ನಂತರದ ಕಾಲದಲ್ಲಿ ದೇಶದ ಸಮಗ್ರ ಆರ್ಥಿಕ ಸುಧಾರಣೆಗೆ ಒತ್ತು ನೀಡಿದೆ. ಇದರಿಂದಾಗಿ ಜಾಗತಿಕ ಮಟ್ಟದಲ್ಲಿ ಭಾರತ ಸದೃಢವಾಗಿ ಬೆಳೆಯಲು ವೇಗ ದೊರೆತಂತಾಗಿದೆ.
ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಆದ್ಯತೆ ದೊರೆತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಸ್ವಾತಂತ್ರ್ಯದ 75ನೇ ವರ್ಷದತ್ತ ಸಾಗುತ್ತಿರುವ ಈ ಅಮೃತ ಕಾಲದಲ್ಲಿ, ದೇಶವನ್ನು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಗೆ ತರಲು ಭದ್ರ ಅಡಿಪಾಯ ಹಾಕುವ ನಿಟ್ಟಿನಲ್ಲಿ ಬಜೆಟ್ ರೂಪಿಸಲಾಗಿದೆ. ಅದರಲ್ಲೂ, ಆರೋಗ್ಯ ಕ್ಷೇತ್ರದಲ್ಲಿ ಹೊಸ ಯೋಜನೆ, ಕ್ರಮಗಳನ್ನು ತಂದು ಜನರ ಜೀವನ ಗುಣಮಟ್ಟ ಅಭಿವೃದ್ಧಿಪಡಿಸಲು ಕ್ರಮ ವಹಿಸಲಾಗಿದೆ.
ದೇಶದಲ್ಲಿ ಈವರೆಗೆ 166 ಕೋಟಿಗೂ ಅಧಿಕ ಲಸಿಕೆಗಳನ್ನು ನೀಡುವ ಮೂಲಕ ಜನರ ಜೀವ, ಜೀವನೋಪಾಯ ಎರಡನ್ನೂ ರಕ್ಷಿಸಲಾಗಿದೆ. ಲಸಿಕಾಕರಣವು ಕೋವಿಡ್ ನಂತರದ ಆರ್ಥಿಕ ಪುಶ್ಚೇತನಕ್ಕೆ ವೇಗ ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.