ಫೆ.14ರಂದು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ, ಅಂದೇ ಮುಂದಿನ ನಿರ್ಧಾರ ಪ್ರಕಟ | ಜನತಾ ನ್ಯೂಸ್
ಬೆಂಗಳೂರು : ಫೆಬ್ರವರಿ 14ರಂದು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಅಂದೇ ತಮ್ಮ ಮುಂದಿನ ರಾಜಕೀಯ ನಿರ್ಧಾರ ಪ್ರಕಟ ಮಾಡುವುದಾಗಿ ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಇಬ್ರಾಹಿಂ, ನನಗೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಸ್ಥಾನವನ್ನು ತಪ್ಪಿಸಲಾಯಿತು. ನನಗೆ ಆದ ಅನ್ಯಾಯ ಸರಿಪಡಿಸಲು ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ ಅವರು ಹೀರೋ ಆಗುತ್ತಿದ್ದರು. ಅದರ ಬದಲು ನನ್ನ ಮುಗಿಸಲು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಸ್ಥಾನ ನೀಡಲಾಯಿತು.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ನ ಅಧ್ಯಾಯ ಮುಗಿದು ಹೋಗಿದ್ದು, ಮುಸ್ಲೀಂ ಮುಖಂಡರು ಒಬ್ಬೊಬ್ಬರಾಗಿಯೇ ಹೊರ ಬರುತ್ತಿದ್ದಾರೆ. ಯಾರಿಗೆ ಏನು ಬೇಕೋ ಅದನ್ನು ತಗೊಂಡು ಹೋಗುತ್ತಿದ್ದಾರೆ.
ಫೆಬ್ರವರಿ 14 ಲವರ್ಸ್ ಡೇ, ಅಂದೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಅದೇ ದಿನ ಯಾವ ಪಕ್ಷದ ಮೇಲೆ ಲವ್ ಆಗಿದೆ ಅಂತಾ ಹೇಳುತ್ತೇನೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.
ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ಸಂಪರ್ಕದಲ್ಲಿದ್ದಾರೆ. ರಣಕಹಳೆ ಶಂಖ ಊದುತ್ತಿದ್ದೇನೆ, 1995ರಲ್ಲಿ ಆದ ಗತಿ 2023ಕ್ಕೂ ಆಗುತ್ತದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಎಸ್ಡಿಪಿಐ ಸೇರಿದಂತೆ ಎಲ್ಲ ಪಕ್ಷಗಳ ಕಾರ್ಯಕರ್ತರೂ ನನ್ನ ಜತೆ ಇದ್ದಾರೆ ಎಂದರು.