ಮಹಿಳೆಯರು ಹಾಕುವ ಬಟ್ಟೆಯಿಂದ ಕೆಲವರು ಉದ್ರೇಕಿತರಾಗ್ತಾರೆ, ಮೆ ಯಾಚಿಸಿದ ರೇಣುಕಾಚಾರ್ಯ | ಜನತಾ ನ್ಯೂಸ್
ಬೆಂಗಳೂರು : ಮಹಿಳೆಯರ ಬಟ್ಟೆಯಿಂದ ಪುರುಷರು ಉದ್ರೇಕಕ್ಕೆ ಒಳಗಾಗುತ್ತಾರೆ ಎಂಬ ಹೇಳಿಕೆ ವಿವಾದ ಆಗುತ್ತಿದ್ದಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಕ್ಷಮೆ ಕೋರಿದರು.
ಮಹಿಳೆಯರು ಬಿಕಿನಿ ಹಾಕವುದು ಅವರ ಮೂಲಭೂತ ಹಕ್ಕು ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ಗೆ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಿಯಾಂಕಾ ಗಾಂಧಿ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ.
ಪ್ರಿಯಾಂಕಾ ಗಾಂಧಿ ದೇಶದ ಕ್ಷಮೆ ಕೇಳಬೇಕು. ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ. ಮಹಿಳೆಯರ ಬಟ್ಟೆ ಪ್ರಚೋದನೆ ನೀಡುತ್ತದೆ ಎಂದು ದೆಹಲಿಯಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಎಚ್ಚೆತ್ತುಕೊಂಡ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ತಕ್ಷಣ ಕ್ಷಮೆ ಯಾಚಿಸಿದ್ದಾರೆ. ಪ್ರಿಯಾಂಕ ಗಾಂಧಿ ಅವರು ತಮ್ಮ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಹೇಳುವುದಷ್ಟೇ ನನ್ನ ಉದ್ದೇಶವಾಗಿತ್ತು. ಮಹಿಳೆಯರ ಬಗ್ಗೆ ಮಾತನಾಡುವುದು ನನ್ನ ಉದ್ದೇಶವಾಗಿರಲಿಲ್ಲ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಇರಲಿ ಎಂದಿದ್ದಾರೆ.
ಪ್ರತಿಯೊಬ್ಬರು ಭಾರತ ಮಾತೆ ಮಕ್ಕಳು. ಹೀಗಾಗಿ ನಾವೆಲ್ಲಾ ಒಂದೇ ತಾಯಿಯ ಮಕ್ಕಳು. ಎಲ್ಲಾ ಅಲ್ಪ ಸಂಖ್ಯಾತರು ಕೆಟ್ಟವರಲ್ಲ. ರಾಜಕಾರಣದಲ್ಲಿ ನಾವು ಕೇಸರೀಕರಣ ಮಾಡುತ್ತೇವೆ. ಆದರ ಶಿಕ್ಷಣದಲ್ಲಿ ನಾವು ಕೇಸರೀಕರಣ ಮಾಡಲ್ಲ ಎಂದು ದೆಹಲಿಯಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.