ಮದುವೆಗೆ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ | ಜನತಾ ನ್ಯೂಸ್
ದೊಡ್ಡಬಳ್ಳಾಪುರ : ಮದುವೆ ನಿರಾಕರಿಸಿದ ಪ್ರಿಯತಮೆಗೆ ಪಾಗಲ್ ಪ್ರೇಮಿ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ಪಟ್ಟಣದ ಯೋಗಿ ನಾರಾಯಣ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.
ಪ್ರಭಾವತಿ ಚಾಕು ಇರಿತಕ್ಕೆ ಒಳಗಾದ ಯುವತಿ. ಗಿರೀಶ್ ಚಾಕು ಇರಿದ ಯುವಕ. ಗಿರೀಶ್ನನ್ನು ದೊಡ್ಡಬಳ್ಳಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೈಸೂರು ಮೂಲದ ಪ್ರಭಾವತಿ.ಡಿ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಟಾರ್ಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ನಗರದ ಯೋಗಿ ನಾರಾಯಣ ಬಡಾವಣೆಯಲ್ಲಿ ಬಾಡಿಗೆ ಮನೆ ಪಡೆದು ತಮ್ಮ ಜತೆ ವಾಸವಾಗಿದ್ದಳು.
ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸ್ಟಾರ್ಫ್ ನರ್ಸ್ ಮತ್ತು ಅಕೌಂಟೆಂಟ್ ನಡುವೆ ಪ್ರೇಮಾಂಕುರವಾಗಿತ್ತು. ಎರಡು ಕುಟುಂಬಗಳ ನಡುವೆ ಮದುವೆ ಮಾತುಕತೆ ಸಹ ನಡೆದಿತ್ತು. ಆದರೆ, ಇಂದು ಬೆಳಗ್ಗೆ ಪ್ರಭಾವತಿ ಮನೆಗೆ ಬಂದ ಗಿರೀಶ್ ಆಕೆಯ ಹೊಟ್ಟೆ, ಕುತ್ತಿಗೆ, ಬೆನ್ನಿಗೆ ಚಾಕುವಿನಿಂದ ಇರಿದಿದ್ದಾನೆ.
ಪ್ರಭಾವತಿಯ ಕೂಗಾಟ ಕೇಳಿದ ಪಕ್ಕದ ಮನೆಯರು ಹೋದಾಗ ಮನೆಯ ಒಳಗಿನಿಂದ ಲಾಕ್ ಮಾಡಲಾಗಿತ್ತು.ಕಿಟಕಿಯನ್ನು ತೆರೆದು ನೋಡಿದಾಗ ಗಿರೀಶ್ ಮನೆಯಲ್ಲಿಯೇ ಇದ್ದ. ಆತನೇ ಬಾಗಿಲು ತೆಗೆದು ಹೊರ ಬಂದಿದ್ದಾನೆ. ಒಳ ಹೋಗಿ ನೋಡಿದಾಗ ಪ್ರಭಾವತಿ ರಕ್ತದ ಮಡುವಿನಲ್ಲಿ ಬಿದ್ದಿದರು.
ತಕ್ಷಣವೇ ಅವರನ್ನು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.