ನಾನೇ ಬರ್ತೀನಿ ನಡೆಯಿರಿ ಅಂದ್ರೆ ಚುನಾವಣೆಗೆ ನಿಲ್ಲಲು ಅಲ್ಲ: ಕುಮಾರಸ್ವಾಮಿ | ಜನತಾ ನ್ಯೂಸ್
ರಾಮನಗರ: : ಮುಂಬರುವ ವಿಧಾನಸಭೆ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ನಾನೇ ಬರ್ತೀನಿ ಅಂದಿದ್ದು ಚುನಾವಣೆಯಲ್ಲಿ ನಿಲ್ಲೋಕೆ ಅಲ್ಲ ಎಂದಿದ್ದಾರೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ.
ತಮ್ಮ ಹೇಳಿಕೆಯಿಂದ ಚಾಮುಂಡೇಶ್ವರಿ ಕ್ಷೇತ್ರದ ಮತ್ತು ಜೆಡಿಎಸ್ ಕ್ಷೇತ್ರದ ಕಾರ್ಯಕರ್ತರಲ್ಲಿ ಉಂಟಾಗಿದ್ದ ಗೊಂದಲಕ್ಕೆ ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ತೆರೆ ಎಳೆದಿದ್ದಾರೆ.
ನನ್ನ ಕಾರ್ಯಕರ್ತರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾರು ಜೆಡಿಎಸ್ ನಾಯಕರು? ಎಂದರು. ಅದಕ್ಕೆ "ನಾನೇ ಬರ್ತೀನಿ ನಡೆಯಿರಿ" ಎಂದೆ. ನಾನೇ ಬರ್ತೀನಿ ನಡೆಯಿರಿ ಅಂದ್ರೆ ಚುನಾವಣೆಗೆ ನಿಲ್ಲಲು ಅಲ್ಲ. ಈ ಹಿಂದೆ ಹೇಗೆ ಚುನಾವಣೆ ನಡೆಸಿದೆ, ಹಾಗೆಯೇ ಈ ಭಾರಿಯೂ ಚುನಾವಣೆ ನಡೆಸಲು ಬರ್ತೀನಿ ಅಂದೆ.
ಚುನಾವಣೆ ನಡೆಸಲು ಬರ್ತೀನಿ ಅಂತ ಹೇಳಿದ್ದೇನೆ. ಕಳೆದ ಚುನಾವಣೆಯಲ್ಲಿ ಹಳ್ಳಿ ಹಳ್ಳಿಗೆ ಭೇಟಿ ಮಾಡಿದ್ದೇನೆ, ಹಾಗೇ ನಾನು ನಾಯಕತ್ವ ವಹಿಸಿಕೊಂಡು ಕೆಲಸ ಮಾಡುತ್ತೇನೆ ಎಂದಿದ್ದೇನೆ ಅಷ್ಟೇ ಎಂದರು.
ರಾಮನಗರದ ಜನರು ಮತ್ತು ಕಾರ್ಯಕರ್ತರ ಜತೆ ನನಗಿರುವ ಬಂಧವನ್ನು ನೂರಾರು ಬಾರಿ ಹೇಳಿದ್ದೇನೆ. ದೇವೇಗೌಡರ ಕುಟುಂಬಕ್ಕೂ ರಾಮನಗರ ಕ್ಷೇತ್ರಕ್ಕೂ ತಾಯಿ-ಮಗುವಿನ ಸಂಬಂಧವಿದೆ ಎಂದರು.