ಬೆಂಗಳೂರಿನ ದೇಗುಲಗಳ ಘಂಟಾನಾದ ಶಬ್ದದಿಂದ ಮಾಲಿನ್ಯ: ಪೊಲೀಸರಿಂದ ನೋಟಿಸ್ | ಜನತಾ ನ್ಯೂಸ್
ಬೆಂಗಳೂರು : ದೇವಸ್ಥಾನಗಳಲ್ಲಿ ಹೆಚ್ಚಿನ ಶಬ್ದವನ್ನುಂಟು ಮಾಡುತ್ತಿರುವ ಸಿಲಿಕಾನ್ ಸಿಟಿಯ ದೇಗುಲಗಳಿಗೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆಯು ಈಗಾಗಲೇ ಬೆಂಗಳೂರಿನಲ್ಲಿನ ಹಲವು ದೇವಸ್ಥಾನಗಳಿಗೆ ಈ ಕುರಿತು ನೊಟೀಸ್ ನೀಡಿದೆ.
ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಡೆಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನು ಪೊಲೀಸ್ ಠಾಣೆಯಿಂದ ದೊಡ್ಡ ಗಣಪತಿ ದೇವಸ್ಥಾನ ಸಮೂಹಕ್ಕೆ ನೋಟೀಸ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಶಬ್ದದ ಗಂಟೆ ಹೊಡೆಯದಂತೆ ಬಸವನಗುಡಿಯ ದೊಡ್ಡ ಗಣಪತಿ ಸಮೂಹ ದೇವಸ್ಥಾನಗಳ ಕಾರ್ಯನಿರ್ವಹಣಾಧಿಕಾರಿ ಸೂಚನೆ ನೀಡಿದ್ದಾರೆ.
ಸೂಚನೆಯ ಹೊರತಾಗಿಯೂ ಹೆಚ್ಚಿನ ಶಬ್ದ ಬರುವಂತೆ ಘಂಟೆ ಹೊಡೆದಲ್ಲಿ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಹೇಳಲಾಗಿದೆ.
ಢಮರುಗ, ಧ್ವನಿ ವರ್ಧಕ ಯಂತ್ರಗಳಿಂದ ಧ್ವನಿ ಹೊರಡಿಸಬಾರದು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪತ್ರದಂತೆ ಶಬ್ದ ಮಾಲಿನ್ಯ ನಿಯಂತ್ರಣ (ತಿದ್ದುಪಡಿ) ಕಾಯ್ದೆ 2010, ಪರಿಸರ ಸಂರಕ್ಷಣಾ ಕಾಯ್ದೆ 1986ರ ಅನ್ವಯ ನಿಗದಿತ ಡೆಸಿಬಲ್ ಶಬ್ದ ಪ್ರಮಾಣಕ್ಕಿಂತ ಹೆಚ್ಚಿನ ಶಬ್ದ ಮಾಡುವ ಸಂಗೀತ ಸಾಧನಗಳನ್ನು ಬಳಸದಂತೆ ತಿಳಿಸಲಾಗಿದೆ.
ಬೆಂಗಳೂರಿನಲ್ಲಿನ ಕಲಾಸಿಪಾಳ್ಯದ ಆಂಜನೇಯ ದೇವಸ್ಥಾನ, ಕಾರಂಜಿ ಆಂಜನೇಯ ದೇವಸ್ಥಾನ, ದೊಡ್ಡಗಣಪತಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಿಗೆ ಈಗಾಗಲೇ ದತ್ತಿ ಇಲಾಖೆಯು ನೊಟೀಸ್ ನೀಡಿದೆ.