ರಾಜಸ್ತಾನ : ಆರ್.ಇ.ಇ.ಟಿ ಪರೀಕ್ಷೆ ಹಗರಣದ ಸಿಬಿಐ ತನಿಖೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ | ಜನತಾ ನ್ಯೂಸ್
ಜೈಪುರ್ : ರಾಜಸ್ಥಾನದ ಶಿಕ್ಷಕರ ಅರ್ಹತಾ ಪರೀಕ್ಷೆಯ(ಆರ್.ಇ.ಇ.ಟಿ) ಪತ್ರಿಕೆ ಸೋರಿಕೆ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತ ಮೇಲೆ ಪೊಲೀಸರು ಜಲಪ್ರಹಾರ ನಡೆಸಿದ್ದಾರೆ. ಶಿಕ್ಷಕರ ನೇಮಕಾತಿಗಾಗಿ ಆರ್.ಇ.ಇ.ಟಿ ಪರೀಕ್ಷೆಯನ್ನು ಸೆಪ್ಟೆಂಬರ್ 26, 2021 ರಂದು ನಡೆಸಲಾಗಿತ್ತು.
ರಾಜಸ್ಥಾನ ರಾಜಧಾನಿ ಜೈಪುರದಲ್ಲಿ ಇಂದು ಮಂಗಳವಾರ ಆರ್.ಇ.ಇ.ಟಿ ಪತ್ರಿಕೆ ಸೋರಿಕೆ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿ 50,000 ಕ್ಕೂ ಹೆಚ್ಚು ಭಾರತೀಯ ಜನತಾ ಪಕ್ಷದ(ಬಿಜೆಪಿ) ರಾಜ್ಯಾದ್ಯಂತದಿಂದ ಬಂದ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದರು.
ಸಿ-ಸ್ಕೀಮ್ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಿಂದ ರಾಜ್ಯ ವಿಧಾನಸಭೆಗೆ ನಿಗದಿಯಾಗಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಪಕ್ಷದ ಹಲವಾರು ಶಾಸಕರು ಮತ್ತು ಸಂಸದರು ಉಪಸ್ಥಿತರಿದ್ದರು. ಆದರೆ, ಮೈದಾನದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ರಾಜ್ಯ ವಿಧಾನಸಭೆಗೆ ತಲುಪದಂತೆ ತಡೆದಿದ್ದಾರೆ.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ, "ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ಜನರನ್ನು ಒಳಗೊಂಡಿರುವ ನಿಜವಾದ ಅಪರಾಧಿಗಳನ್ನು ರಕ್ಷಿಸಲು ವಿಷಯವನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ".