ಹಿಜಾಬ್ ಪ್ರಕರಣ: ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್ | ಜನತಾ ನ್ಯೂಸ್
ಬೆಂಗಳೂರು : ಹಿಜಾಬ್ ಕುರಿತು ಪ್ರಕರಣದ ಹೈ ಕೋರ್ಟ್ನ ತ್ರಿ ಸದಸ್ಯ ಪೀಠ ಸತತ ಎಂಟನೇ ದಿನವೂ ಅರ್ಜಿ ವಿಚಾರಣೆ ನಡೆಸಿದ್ದು, ನಾಳೆಗೆ ವಿಚಾರಣೆ ಮುಂದೂಡಿಸಿದೆ. ಇಂದು 2. 30ಕ್ಕೆ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಪೀಠದ ಮುಂದೆ ವಾದ-ಪ್ರತಿವಾದಗಳು ನಡೆದವು.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ನೇತೃತ್ವದ ತ್ರಿ ಸದಸ್ಯ ಪೀಠ ಒಂದು ವಾರದಿಂದ ಅರ್ಜಿಗಳ ವಿಚಾರಣೆ ನಡೆಯುತ್ತಿದ್ದು, ವಿಚಾರಣೆಯನ್ನ ನಾಳೆಗೆ ಮುಂದೂಡಿದೆ.
ಹಿಜಾಬ್ ಧರಿಸುವುದು ಅಥವಾ ಧರಿಸದಿರುವ ಅವರ ಸ್ವಾತಂತ್ರ್ಯದ ಆಯ್ಕೆಯನ್ನು ಒಳಗೊಂಡಿರುತ್ತದೆ. ಇದನ್ನು ಕಡ್ಡಾಯ ಮಾಡುವುದು ಅರ್ಜಿದಾರರ ಸಂಪೂರ್ಣ ಹಕ್ಕು ಬಲವಂತ ಮಾಡುವುದಾಗಿದೆ, ಇದು ಸಂವಿಧಾನದ ನೀತಿಗೆ ವಿರುದ್ಧವಾಗಿದೆ. ಇದನ್ನು ಕಡ್ಡಾಯ ಮಾಡಲು ಸಾಧ್ಯವಿಲ್ಲ,ಈ ಹಿನ್ನಲೆ ಸಂಬಂಧಪಟ್ಟ ಮಹಿಳೆಯರ ಆಯ್ಕೆಗೆ ಬಿಡಬೇಕು. ಮಹಿಳೆಯ ಘನತೆ ಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು ಎಂದು ವಾದ ಪೂರ್ಣ ಗೊಳಿಸಿದರು.
ಉಡುಪಿ ಪಿಯು ಕಾಲೇಜು ಶಿಕ್ಷಕರ ಪರ ಹಿರಿಯ ವಕೀಲರಾದ ಆರ್, ವೆಂಕಟರಮಣಿ ಅವರು, ಯಾವುದೇ ಧರ್ಮ ದೊಡ್ಡದು ಯಾವುದೇ ಧರ್ಮ ಚಿಕ್ಕದು ಅಲ್ಲ. ಸಾರ್ವಜನಿಕ ಸ್ಥಳಕಿಂತ ಶಾಲಾ ಕೊಠಡಿಗೆ ಪ್ರಾಮುಖ್ಯತೆ ಇದೆ. ಎಲ್ಲಾ ಮಕ್ಕಳ ಮನಸ್ಸು ಶಿಕ್ಷಣಕ್ಕಾಗಿ ಒಂದಾಗಿರಬೇಕು. ಯಾವುದು ಧರ್ಮ ದೊಡ್ಡದು ಚಿಕ್ಕದು ಭಾವನೆ ಇರಬಾರದು. ಯಾವುದೇ ಆಚರಣೆಗಳಿರಬಹುದು, ಯಾವುದೇ ನಂಬಿಕೆಗಳಿರಬಹುದು ನೈತಿಕತೆಗೆ ವಿರುದ್ಧವಾಗಿದ್ದರೆ ಸುವ್ಯವಸ್ಥೆ, ಆರೋಗ್ಯಕ್ಕೆ ವಿರುದ್ಧವಾಗಿದ್ದರೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಅವಕಾಶವಿದೆ ಎಂದು ವಾದಿಸಿದರು.