Sun,May19,2024
ಕನ್ನಡ / English

ನಾಪತ್ತೆಯಾದ ಪತ್ನಿ ಫೋಟೋಗೆ ಫೇಸ್‍ಬುಕ್‍ನಲ್ಲಿ RIP ಎಂದ ಗಂಡ: ಪೋಷಕರಲ್ಲಿ ಆತಂಕ | ಜನತಾ ನ್ಯೂಸ್

25 Feb 2022
3398

ದೊಡ್ಡಬಳ್ಳಾಪುರ : ಗಂಡ ತನ್ನ ಫೇಸ್​ಬುಕ್ ಅಕೌಂಟ್​ನಲ್ಲಿ ಹೆಂಡತಿಯ ಫೋಟೋ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ. ಇದೀಗ ಹೆಂಡತಿ ನಾಪತ್ತೆಯಾಗಿದ್ದಾಳೆ.

ಇದನ್ನು ನೋಡಿದ ಯುವತಿಯ ಪೋಷಕರು ಮಗಳನ್ನು ಹುಡುಕಿಕೊಂಡು ಗಂಡನ ಮನೆಗೆ ಬಂದಿದ್ದಾರೆ ಆಗ ನಾಪತ್ತೆಯಾಗಿರೋದು ಗೊತ್ತಾಗಿದೆ, ಪೋಷಕರಲ್ಲಿ ಆತಂಕ ಉಂಟುಮಾಡಿದೆ.

ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಉದನಹಳ್ಳಿ ಗ್ರಾಮದಲ್ಲಿ ನಡೆದಿದ್ದು, 22 ವರ್ಷದ ಲೀಲಾವತಿ ನಾಪತ್ತೆಯಾದ ಗೃಹಿಣಿಯಾಗಿದ್ದಾರೆ. ಲೀಲಾವತಿ ಅವರನ್ನು ಊದನಹಳ್ಳಿ ಗ್ರಾಮದ ಆರ್ಕೆಸ್ಟ್ರಾ ಕಲಾವಿದ ಮುನಿಕೃಷ್ಣ ಜೊತೆ ಮದುವೆ ಮಾಡಿಕೊಡಲಾಗಿತ್ತು.

ಫೆಬ್ರವರಿ 23ರ ರಾತ್ರಿ ಮುನಿಕೃಷ್ಣ ತನ್ನ ತಂಗಿ ಮಗನ ಬರ್ತ್​ಡೇ ಪಾರ್ಟಿಗೆ ಹೋಗಿದ್ದ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಲೀಲಾವತಿ ತನ್ನ ಗಂಡನ ಜೊತೆ ಜಗಳ ಮಾಡಿದ್ದಾಳೆ. ಈ ವೇಳೆ ಮುನಿಕೃಷ್ಣ ಹೆಂಡತಿಗೆ ಹೊಡೆದಿದ್ದ ಎನ್ನಲಾಗಿದ್ದು, ಮರುದಿನ ಮಧ್ಯಾಹ್ನ ಒಂದು ಗಂಟೆಗೆ ತನ್ನ ಫೇಸ್​ಬುಕ್ ಅಕೌಂಟ್​ನಲ್ಲಿ ಹೆಂಡತಿಯ ಫೋಟೋ ಹಾಕಿ RIP ಎಂದು ಬರೆದು ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

ಈ ಪೋಸ್ಟ್ ನೋಡಿ ಗಾಬರಿಗೊಂಡ ಲೀಲಾವತಿ ತಂದೆ ಉದನಹಳ್ಳಿಗೆ ಬಂದು ಮಗಳನ್ನು ಹುಡುಕಾಡಿದ್ದಾರೆ. ಆದರೆ ಮಗಳು ಪತ್ತೆಯಾಗದ ಕಾರಣ ತನ್ನ ಮಗಳನ್ನು ಹೊಡೆದು ಸಾಯಿಸಿದ್ದಾನೆಂದು ನೆನೆದು ಕಣ್ಣೀರು ಹಾಕಿದ್ದಾರೆ. ಮುನಿಕೃಷ್ಣನೇ ಹೊಡೆದು ಸಾಯಿಸಿದ್ದಾನೆಂದು ಎಂದು ಆರೋಪಿಸಿದ್ದಾರೆ.

ಈ ಕುರಿತು ಮುನಿಕೃಷ್ಣನ ತಮ್ಮ ಮುನಿರಾಜುನನ್ನು ಕೇಳಿದ್ರೆ ಆತ ಬೇರೆಯೇ ಕಥೆ ಹೇಳುತ್ತಿದ್ದಾನೆ. ಬರ್ತ್ ಡೇ ಪಾರ್ಟಿ ವಿಚಾರಕ್ಕೆ ಅಣ್ಣ-ಅತ್ತಿಗೆ ನಡುವೆ ಜಗಳವಾಗಿದ್ದು ನಿಜ. ಮರುದಿನ ಬೆಳಗ್ಗೆ ಅತ್ತಿಗೆಗೆ ಅಣ್ಣ ಹೊಡೆದ. ಅನಂತರ ಅತ್ತಿಗೆ ಬ್ಯಾಗ್ ತೆಗೆದುಕೊಂಡು ಮನೆ ಬಿಟ್ಟು ಹೋಗಿದ್ದಾಳೆ. ಅಣ್ಣನ ಮೊಬೈಲ್ ಆಕೆಯ ಬಳಿ ಇದ್ದು, ಅತ್ತಿಗೆಯೇ ಅಣ್ಣನ ಫೇಸ್​ಬುಕ್ ಅಕೌಂಟ್​ನಲ್ಲಿ ತನ್ನ ಫೋಟೋ ಹಾಕಿ RIP ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾಳೆ ಎನ್ನುತ್ತಿದ್ದಾನೆ.

RELATED TOPICS:
English summary :Husband as RIP on Facebook for photo of missing wife: Anxiety from parents

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...