ಮುದ್ದಿನ ನಾಯಿ ಬಿಟ್ಟು ಭಾರತಕ್ಕೆ ಬರೊಲ್ಲ: ಉಕ್ರೇನ್ನಲ್ಲಿ ಸಿಲುಕಿರುವ ವಿದ್ಯಾರ್ಥಿ | ಜನತಾ ನ್ಯೂಸ್
ಉಕ್ರೇನ್ : ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತದ ಮೂರನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ, ತನ್ನ ಮುದ್ದಿನ ನಾಯಿಯನ್ನು ತೊರೆದು ಬರುವುದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ.
ಪೂರ್ವ ಉಕ್ರೇನ್ನ ಖಾರ್ಕೀವ್ ರೇಡಿಯೋ ಎಲೆಕ್ಟ್ರಾನಿಕ್ಸ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿರುವ ರಿಷಬ್ ಕೌಶಿಕ್ ಎಂಬಾತ, ತನ್ನನ್ನು ಏರ್ಲಿಫ್ಟ್ ಮಾಡುವಾಗ ತನ್ನೊಂದಿಗೆ ನಾಯಿಯನ್ನೂ ಕರೆದುಕೊಂಡು ಬರಲು ಅನುಮತಿ ಪಡೆಯಲು ಎಲ್ಲ ದಾಖಲೆ ಸಲ್ಲಿಕೆಗೆ ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾನೆ.
ಕಳೆದ ಫೆಬ್ರವರಿಯಲ್ಲಿ ಖಾರ್ಕಿವ್ನಲ್ಲಿ ನಾಯಿಮರಿ "ಮಾಲಿಬು" ಸಿಕ್ಕಿದೆ. ಅದು ನನ್ನ ಜೊತೆಗೆ ಇದೆ. ನಾನು ವಿಮಾನಯಾನ ಮಾಡುವಾಗ ತನ್ನ ನಾಯಿಯು ತನ್ನೊಂದಿಗೆ ಬರಲು ಎಲ್ಲಾ ದಾಖಲೆಗಳು ಮತ್ತು ಅನುಮತಿಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿಕೊಂಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ನನ್ನ ಜೊತೆಗೆ ನಾಯಿಯನ್ನು ಕರೆದುಯಕೊಂಡು ಬರಲು ವಿಮಾನ ಟಿಕೆಟ್ ಕೇಳುತ್ತಿದ್ದಾರೆ. ಉಕ್ರೇನ್ನಲ್ಲಿ ನಾವು ಹೊರಗೆ ಹೋಗುವ ಪರಿಸ್ಥಿತಿ ಇಲ್ಲ. ವಿಮಾನ ನಿಲ್ಧಾಣವನ್ನು ಮುಚ್ಚಿದ್ದಾರೆ. ನಾನು ಹೇಗೆ ಟಿಕೆಟ್ ತೆಗೆದು ಕೊಳ್ಳಬೇಕು. ದೆಹಲಿಯಲ್ಲಿರುವ ಭಾರತೀಯ ಸರ್ಕಾರದ ಎನಿಮಲ್ ಕ್ವಾರಂಟೈನ್ ಮತ್ತು ಪ್ರಮಾಣೀಕರಣ ಸೇವೆ ಮತ್ತು ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿದೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಹೇಳುತ್ತಾ ಬೇಸರ ವ್ಯಕ್ತಪಡಿಸಿದ್ದಾರೆ.
ನನ್ನ ನಾಯಿಯನ್ನು ಬಿಡಲು ಸಾಧ್ಯವಾಗದಿದ್ದರೆ, ನಾನು ಸಹ ಉಕ್ರೇನ್ ಬಿಡುವುದಿಲ್ಲ ಎಂದು ನಾನು ನಿರ್ಧರಿಸಿದೆ. ಹಾಗೆಯೇ ಉಳಿಯುವಲ್ಲಿ ಅಪಾಯವಿದೆ ಎಂದು ನನಗೆ ತಿಳಿದಿದೆ. ಆದರೆ ನಾನು ಅದನ್ನು ತ್ಯಜಿಸಲು ಸಾಧ್ಯವಿಲ್ಲ.ನಾನು ಹೋದರೆ ಅವನನ್ನು ಯಾರು ನೋಡಿಕೊಳ್ಳುತ್ತಾರೆ. ಎಂದು ಅವರು ಕೇಳಿದರು.ಅವರು ನನ್ನ ವಿಮಾನ ಟಿಕೆಟ್ ಕೇಳುತ್ತಿದ್ದಾರೆ. ಉಕ್ರೇನಿಯನ್ ವಾಯುಪ್ರದೇಶವನ್ನು ಮುಚ್ಚಿದಾಗ ನಾನು ವಿಮಾನ ಟಿಕೆಟ್ ಅನ್ನು ಹೇಗೆ ಹೊಂದಬಹುದು? ಅವರು ಹೇಳಿದರು.
ನನ್ನ ವಿಮಾನವು ಫೆ. 27ರಂದು ನಿಗದಿಯಾಗಿದೆ. ಆದರೆ, ನಾನು ಇಲ್ಲಿಯೇ ಸಿಲುಕಿಕೊಂಡಿದ್ದೇನೆ. ಈ ನಾಯಿ ಬಾಂಬ್ಗಳ ಸದ್ದಿನಿಂದಾಗಿ ವಿಪರೀತ ಹೆದರಿದ್ದು, ನೋವು ಅನುಭವಿಸುತ್ತಿದೆ ಎಂದು ಹೇಳಿದ್ದಾನೆ.
ನಿಮ್ಮಿಂದ ಸಾಧ್ಯವಾದರೆ ದಯವಿಟ್ಟು ನನಗೆ ಸಹಾಯ ಮಾಡಿ. ಕೀವ್ನಲ್ಲಿರುವ ರಾಯಭಾರ ಕಚೇರಿ ಕೂಡ ನಮಗೆ ಸಹಾಯ ಮಾಡುತ್ತಿಲ್ಲ. ನಮಗೆ ಯಾರಿಂದಲೂ ಯಾವ ಮಾಹಿತಿಯೂ ಸಿಗುತ್ತಿಲ್ಲ ಎಂದು ಮನವಿ ಮಾಡಿದ್ದಾನೆ.