ಅಂಬಿ ಸ್ಮಾರಕಕ್ಕೆ ಸಿಎಂ ಭೂಮಿ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ | ಜನತಾ ನ್ಯೂಸ್
ಬೆಂಗಳೂರು : ರೆಬೆಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ, ಸಿಎಂ ಬಸವರಾಜ ಬೊಮ್ಮಾಯಿ ಇಂದು ಶಂಕು ಸ್ಥಾಪನೆ ನೆರವೇರಿಸಿದ್ದಾರೆ.
ಕಂಠೀರವ ಸ್ಟುಡಿಯೋ ಆವರಣದಲ್ಲಿ ಡಾ.ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ನಂತರ ಮಾತನಾಡಿದ ಸಿಎಂ, ಅಂಬರೀಶ್ರ ಸ್ಮಾರಕ ನಿರ್ಮಾಣವಾಗಬೇಕು ಎಂಬುದು ಎಲ್ಲರ ಅಭಿಲಾಷೆ. ಪುನೀತ್ ರಾಜಕುಮಾರ್ ಅವರ ಸ್ಮಾರಕವನ್ನೂ ಶೀಘ್ರದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಮಾಡಲಿದ್ದೇವೆ. ಪುನೀತ್ಗೆ ಕರ್ನಾಟಕ ರತ್ನವನ್ನು ನೀಡುವ ದಿನಾಂಕವನ್ನು ಪ್ರಕಟಿಸಲಾಗುವುದು ಎಂದರು.
ಶಂಕು ಸ್ಥಾಪನೆ ಮಾಡಿದ ಸಿಎಂ ಬೊಮ್ಮಾಯಿ, ಅದಾದ ಬಳಿಕ ಸ್ಮಾರಕದ ನೀಲ ನಕ್ಷೆಯನ್ನು ರಿಲೀಸ್ ಮಾಡಿದ್ದಾರೆ. ಸುಮಾರು 1.35 ಎಕರೆ ಜಾಗದಲ್ಲಿ 12 ಕೋಟಿ ರೂ ವೆಚ್ಚದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣವಾಗಲಿದೆ.
ಈ ಬಳಿಕ ಮಾತನಾಡಿದಂತ ಅವರು, ನನ್ನ ಆತ್ಮೀಯ ಸ್ನೇಹಿತ ಅಂಬರೀಶ್. ನಾನು ಅವರನ್ನು ಯಾವಾಗಲೂ ಅಂಬರೀಶ್ ಅಂತ ಕರೆಯುತ್ತಿದ್ದೆ. ಅವರ ನನ್ನ ಸ್ನೇಹ 40 ವರ್ಷಗಳದ್ದು. ಅಂಬರೀಶ್ ಯಾವತ್ತೂ ತಮ್ಮ ಆತ್ಮಸಾಕ್ಷಿಗೆ ಬದ್ಧರಾಗಿದ್ದರು ಎಂದರು.
ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಅಂಬರೀಶ್, ಸಂಸದ ಸದಾನಂದ ಗೌಡ, ಸಚಿವ ಅಶ್ವತ್ಥ್ ನಾರಾಯಣ್, ಗೋಪಾಲಯ್ಯ, ಎಸ್.ಟಿ ಸೋಮಶೇಖರ್, ಆರ್.ಅಶೋಕ್, ಶಾಸಕ ಸತೀಶ್ ರೆಡ್ಡಿ ಸೇರಿದಂತೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ದೊಡ್ಡಣ್ಣ ಉಪಸ್ಥಿತರಿದ್ದರು.