ಉಕ್ರೇನ್ನಲ್ಲಿ ಭಾರತದ ವಿದ್ಯಾರ್ಥಿಗಳು ಒತ್ತೆಯಾಳಾಗಿಲ್ಲ: ರಷ್ಯಾದಿಂದ ಆರೋಪ, ಭಾರತ ಸ್ಪಷ್ಟನೆ | ಜನತಾ ನ್ಯೂಸ್
ನವದೆಹಲಿ : ಉಕ್ರೇನ್ ಪಡೆಗಳು ಖಾರ್ಕೀವ್ ನಗರದಲ್ಲಿ ಭಾರಿ ದೊಡ್ಡ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿವೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಗಂಭೀರ ಆರೋಪ ಮಾಡಿದೆ.
ಉಕ್ರೇನ್ ಒಳಗೆ ಭಾರತೀಯರು ಸೇರಿದಂತೆ ವಿವಿಧ ದೇಶಗಳ ಪ್ರಜೆಗಳ ಮೇಲೆ ಹಲ್ಲೆ ನಡೆದ ಘಟನೆಗಳು ವರದಿಯಾಗಿರುವ ವೇಳೆಯೇ ರಷ್ಯಾ ಈ ಹೇಳಿಕೆ ನೀಡಿದೆ.
ರಷ್ಯಾ ಆರೋಪ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ಉಕ್ರೇನ್ ಮೇಲೆ ರಷ್ಯಾ ಆರೋಪಿಸಿರುವಂತೆ ಯಾವುದೇ ವಿದ್ಯಾರ್ಥಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿರುವ ಕುರಿತು ವರದಿ ಬಂದಿಲ್ಲ ಎಂದು ಭಾರತ ಹೇಳಿದೆ. ಉಕ್ರೇನ್ನಲ್ಲಿರುವ ಭಾರತೀಯ ಪ್ರಜೆಗಳ ಜತೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ತಿಳಿಸಿದೆ.
ಯಾವುದೇ ವಿದ್ಯಾರ್ಥಿಗೆ ಸಂಬಂಧಿಸಿದಂತೆ ಯಾವುದೇ ಒತ್ತೆಯಾಳು ಸನ್ನಿವೇಶದ ಕುರಿತು ನಮಗೆ ವರದಿಗಳು ಬಂದಿಲ್ಲ. ಖಾರ್ಕೀವ್ನಿಂದ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ವಿದ್ಯಾರ್ಥಿಗಳನ್ನು ದೇಶದ ಪಶ್ಚಿಮ ಭಾಗದ ಕಡೆಗೆ ಹೊರಗೆ ಸಾಗಿಸಲು ವಿಶೇಷ ರೈಲುಗಳ ವ್ಯವಸ್ಥೆ ಮಾಡುವಂತೆ ನಾವು ಉಕ್ರೇನ್ ಅಧಿಕಾರಿಗಳ ನೆರವು ಕೋರಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ತಿಳಿಸಿದ್ದಾರೆ.
Our response to media queries regarding reports of Indian students being held hostage in Ukraine ⬇️https://t.co/RaOFcV849D pic.twitter.com/fOlz5XsQsc
— Arindam Bagchi (@MEAIndia) March 3, 2022