ಹರ್ಷ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ! | ಜನತಾ ನ್ಯೂಸ್
ಶಿವಮೊಗ್ಗ : ಹರ್ಷನ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಮಾರ್ಚ್ 6ರಂದು ಹರ್ಷನ ಮನೆಗೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ನಾನು ಹೋಗಿ 25 ಲಕ್ಷ ರೂ ಪರಿಹಾರ ನೀಡುತ್ತೆವೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಹರ್ಷ ಕೊಲೆಯ ಬಗ್ಗೆ ಬೊಮ್ಮಯಿ ದುಃಖವನ್ನು ವ್ಯಕ್ತಪಡಿಸಿದ್ದಾರೆ. ನನ್ನ ಜೊತೆ ದೂರವಾಣಿಯಲ್ಲಿ ಮಾತನಾಡಿ ಹರ್ಷನ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು..
ಕಾಂಗ್ರೆಸ್ ನವರು ಯಾಕೆ ಇದುವರೆಗೂ ಮಾತನಾಡುತ್ತಿಲ್ಲ. ಜಿಲ್ಲಾ ಕಾಂಗ್ರೆಸ್ನವರು ಹೇಳಿಕೆ ನೀಡಿದ್ದಾರೆ. ಆದರೆ ರಾಜ್ಯ ನಾಯಕರು ಮಾಡುತ್ತಿಲ್ಲ. ಡಿಕೆಶಿ ಅವರು ಪಾದಯಾತ್ರೆ ಮುಗಿಸಿ ಬರ್ತಿನಿ ಅಂತ ಹೇಳಿದ್ದಾರೆ ಇದನ್ನು ಸ್ವಾಗತ ಮಾಡುತ್ತೇನೆ ಎಂದರು.
ಯು.ಟಿ.ಖಾದರ್ ನೇತೃತ್ವದಲ್ಲಿ ಸಭೆ ಆಯ್ತು. ಎಲ್ಲಾ ಮುಸಲ್ಮಾನ್ ಶಾಸಕರು ಸಭೆ ನಡೆಸಿ, ಇಂತಹ ಘಟನೆಗೆ ಪಿಎಫ್ಐ, ಎಸ್ಡಿಪಿಐ ಕಾರಣ ಕ್ರಮ ಕೈಗೊಳ್ಳಿ ಅಂದಿದ್ದರು. ಆ ನಾಯಕರುಗಳೇ ಸಂಘಟನೆ ನಿಷೇಧ ಮಾಡಿ ಅಂದಿದ್ದರು. ಆದರೆ ಡಿಕೆಶಿ, ಸಿದ್ದರಾಮಯ್ಯ ಮಾತ್ರ ಆರ್ಎಸ್ಎಸ್ ಕಾರಣ ಅಂತಿದ್ದಾರೆ. ಆಸ್ತಿ-ಪಾಸ್ತಿ ಹಾನಿ ಮಾಡಿದವರಲ್ಲಿ ಹೊರಗಡೆಯವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಷ್ಟ ಆಗಿರುವವರಿಗೆ ಸರ್ಕಾರದಿಂದ ಪರಿಹಾರ ಕೊಡ್ತೇವೆ ಎಂದು ಭರವಸೆ ನೀಡಿದರು.
ರಾಜಕೀಯ ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ. ಎಸ್ ಡಿ ಪಿ ಐ ನಿಷೇಧದ ಕುರಿತು ನಮ್ಮ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸುವ ಚರ್ಚೆ ನಡೆಸುತ್ತಿದ್ದೆವೆ ಎಂದರು.