ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದ ಹಲವು ಕಡೆ ಮಾರ್ಚ್ 7ರ ಬಳಿಕ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾರ್ಚ್ 7ರ ಬಳಿಕ ಗುಡುಗ ಸಹಿತ ಭಾರೀ ಮಳೆಯಾಗೋ ಸಾಧ್ಯತೆ ಇದೆ. ಬಂಗಾಳ ಕೊಲ್ಲಿ ಭಾಗದಲ್ಲಿ ವಾಯುಭಾರ ಕುಸಿತದ ವಾತಾವರಣ ಉಂಟಾಗಿದೆ. ಇದರಿಂದ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಾರ್ಚ್ 7 ರಂದು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಾಗೂ ಪಶ್ಚಿಮ ಘಟ್ಟದ ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆ ಇದೆ.
ಮಾರ್ಚ್ 9ರವರೆಗೂ ಪಶ್ಚಿಮ ಘಟ್ಟ ಭಾಗಗಳಲ್ಲಿ ಮಳೆಯಾಗಲಿದೆ. ಮಾರ್ಚ್ 8 ಮತ್ತು 9ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ಸುರಿಯುವ ಸಂಭವ ಇದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣಹವೆ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.