ಸಾರಿಗೆ ಇಲಾಖೆ ಸಿಬ್ಬಂದಿಗಳಿಗೆ ಸಿಹಿಸುದ್ದಿ: ಸಚಿವ ಬಿ.ಶ್ರೀರಾಮುಲು | ಜನತಾ ನ್ಯೂಸ್
ಬೆಂಗಳೂರು : ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿ ನೀಡಿದ್ದು ಸಾರಿಗೆ ಇಲಾಖೆಯ ಸಿಬ್ಬಂದಿಗಳಿಗೆ ಸಂಬಳ ಒಂದು ವಾರದೊಳಗೆ ಬಾಕಿ ಸಂಬಳ ನೀಡಲಾಗುವುದು ಎಂದು ಹೇಳಿದ್ದಾರೆ.
ಮುಂದಿನ ತಿಂಗಳಿಂದ ಸಿಬ್ಬಂದಿಗೆ ನಿರಂತರವಾಗಿ ಸಂಬಳ ನೀಡಲಾಗುತ್ತದೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ 3 ಸಾವಿರ ಕೋಟಿ ಇಲಾಖೆಗೆ ನೀಡಿದ್ದಾರೆ. 3 ಸಾವಿರ ಕೋಟಿ ಸಂಬಳ ನೀಡಲು ಕೊಟ್ಟಿದ್ದಾರೆ. ಇನ್ನು ಮುಂದೆ ಚಾಲಕರ, ನಿರ್ವಾಹಕರು ಹಾಗೂ ಸಿಬ್ಬಂದಿ ಸಂಬಳಕ್ಕೆ ಕಾಯಬೇಕಿಲ್ಲ. ಅಡಮಾನ ಇಟ್ಟಿದ್ದು ವೈಯಕ್ತಿಕ ಬಳಕೆಗೆ ಅಲ್ಲ. ಸಿಬ್ಬಂದಿ ಭವಿಷ್ಯದ ನಿಧಿಗಾಗಿ ಎಂದು ಸ್ಪಷ್ಟಪಡಿಸಿದ ರಾಮುಲು, ನಮ್ಮ ಇಲಾಖೆ ದಿವಾಳಿ ಆಗಿದೆ ಅಂತ ಹೇಳುತ್ತಾರಲ್ಲ. ಇದು ಲಾಭದಾಯಕ ಮಾಡುವ ಉದ್ದೇಶ ಅಲ್ಲ ಎಂದರು.
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹುಬ್ಬಳ್ಳಿ ಕಡೆ 16 ಎಕರೆ ಅಡಮಾನ ಇಡಲಾಗಿದೆ. ಕಲ್ಯಾಣ ಕರ್ನಾಟಕದಲ್ಲೂ ಕೆಲವು ಜಮೀನು ಅಡಮಾನ ಇಡಲಾಗಿದೆ. ಸಂಸ್ಥೆ ಜಾಗ ಅಡಮಾನ ಇಟ್ಟ ಹಣ ಸಿಬ್ಬಂದಿ ಭವಿಷ್ಯ ನಿಧಿಗೆ ನೀಡಲಾಗಿದೆ. ಕಡಿಮೆ ದರದಲ್ಲಿ ಬಡ್ಡಿ ಇದ್ದ ಕಾರಣ ಆಸ್ತಿ ಅಡಮಾನ ಇಡಲಾಗಿದೆ. ಇನ್ನೂ ಒಂದೂವರೆ ತಿಂಗಳ ಸಂಬಳ ಮಾತ್ರ ಬಾಕಿ ಇದೆ ಎಂದರು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಗರದ ಗಾರ್ಮೆಂಟ್ಸ್ ನ ಮಹಿಳಾ ನೌಕರರಿಗೆ ಬಂಪರ್ ಗಿಫ್ಟ್ ನೀಡಿದೆ. ಬಿಎಂಟಿಸಿಯಿಂದ ನಗರದ 3 ಲಕ್ಷ ಮಹಿಳಾ ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ.
ವನಿತಾ ಸಂಗಾತಿ ಯೋಜನೆ ಅಡಿಯಲ್ಲಿ ಗಾರ್ಮೆಂಟ್ಸ್ ಕಾರ್ಮಿಕರಿಗೆ ಪಾಸ್ ವಿತರಣೆ ಮಾಡಲು ಬಿಎಂಟಿಸಿ ಮುಂದಾಗಿದೆ. ಇದು ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಬಜೆಟ್ ನಲ್ಲಿ ಉಚಿತ ಬಸ್ ಪಾಸ್ ನೀಡೋದಾಗಿ ಹೇಳಿದ್ದರು. ಅಂದು ಬಜೆಟ್ ಮಂಡಿಸಿದ್ದ ಯಡಿಯೂರಪ್ಪನವರು ವನಿತಾ ಸಂಗಾತಿ ಹೆಸರಿನಲ್ಲಿ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದರು. ಈ ಮೂಲಕ ಮಹಿಳಾ ಕಾರ್ಮಿಕರ ಬದುಕಿಗೆ ನೆರವಾಗಲು ಹೊರಟಿರುವ ಸರ್ಕಾರ ಮತ್ತು ಬಿಎಂಟಿಸಿ ಮುಂದಾಗಿದೆ ಎಂದು ತಿಳಿಸಿದರು.