ನಾನು ರಾಸಲೀಲೆ ಮಾಡಲು ಹೋಗ್ತಿರಲಿಲ್ಲ, ರೆಸ್ಟ್ ಮಾಡಲು ಹೋಗ್ತಿದ್ದೆ: ಯೋಗೇಶ್ವರ್ ಗೆ ಹೆಚ್ ಡಿಕೆ ತಿರುಗೇಟು | ಜನತಾ ನ್ಯೂಸ್
ಬೆಂಗಳೂರು : ಕುಮಾರಸ್ವಾಮಿ ಫೈವ್ಸ್ಟಾರ್ ಹೋಟೆಲ್ನಲ್ಲಿ ರಾಸಲೀಲೆ ಆಡ್ತಿದ್ದರು ಅಂತ ಯೋಗೇಶ್ವರ್ ಆರೋಪಿಸಿದ್ದಾರೆ. ಯೋಗೇಶ್ವರ್ ಹೇಳಿಕೆಗೆ ಕೆಂಡಮಂಡಲರಾದ ಕುಮಾರಸ್ವಾಮಿ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ತಾಜ್ ವೆಸ್ಟೆಂಡ್ನಲ್ಲಿ ನಾನು ರಾಸಲೀಲೆ ಮಾಡಲು ಹೋಗುತ್ತಿರಲಿಲ್ಲ ಎಂದು ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈಗಲೂ ತಾಜ್ ವೆಸ್ಟೆಂಡ್ ಹೋಟಲ್ಗೆ ಹೋಗ್ತೀನಿ. ನನ್ನದು ತೆರೆದ ಪುಸ್ತಕ. ನನ್ನ ಪಿಎ ಈಗಲೂ ಆ ಹೊಟೆಲ್ನಲ್ಲಿಯೇ ಇರುತ್ತಾರೆ. ನಾನು ಒಬ್ಬನೆ ಅಲ್ಲ ನನ್ನ ಜೊತೆ ಸಾ.ರಾ ಮಹೇಶ್ ಅವರು ಕೂಡಾ ಇರುತ್ತಿದ್ದರು. ಇದನ್ನೇಲ್ಲಾ ಇವನ ಹತ್ತಿರ ನೋಡಿ ಕಲಿಯಬೇಕಿತ್ತಾ? ನಾವೆಲ್ಲಾ ಹೋಟೆಲ್ನಲ್ಲಿದ್ದರೆ ಇವನೇನು ಗುಡಿಸಲಲ್ಲಿ ಇರುತ್ತಿದ್ದನಾ? ಇವನ ಬಗ್ಗೆ ನನಗೆ ಗೊತ್ತಿಲ್ಲವಾ ಇಲ್ಲೆ ಯು.ಬಿ ಸಿಟಿ ಪಕ್ಕದಲ್ಲಿ ಇವನು ಇದ್ದನು. ನನ್ನದು ಕದ್ದು ಮುಚ್ಚಿ ಯಾವುದೂ ಇಲ್ಲ ಎಂದರು.
ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಇವನತ್ರ ನೋಡಿ ನಾನು ಕಲಿಯಬೇಕಿತ್ತಾ. ಇವನು ಗುಡಿಸಲಲ್ಲಿ ಇದ್ದನಾ? ಇಲ್ಲೇ ಯು,ಬಿ ಸಿಟಿ ಪಕ್ಕದಲ್ಲೇ ಇದ್ನಲ್ಲ. ನಾನು ಯಾವ ವ್ಯವಹಾರವನ್ನು ಕದ್ದುಮುಚ್ಚಿ ಮಾಡಿಲ್ಲ ಸ್ವಾಮಿ ಅವನನ್ನ ನೋಡಿ ನಾನು ಕಲಿಯಬೇಕಾಗಿರೋದು ಏನು ಇಲ್ಲ ಅಂತ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಚನ್ನಪಟ್ಟಣದಲ್ಲಿ ಕೆಲಸವೇ ಅಗಿಲ್ಲ ಅಂತ ಚನ್ನಪಟ್ಟಣಕ್ಕೆ ಬರಲಿ ನಾನು ಶಾಸಕನಾಗಿ ಏನು ಮಾಡ್ಬೇಕೋ ಎಲ್ಲ ಮಾಡಿದ್ದೇನೆ. ಬಸ್ ಸ್ಟಾಂಡ್ ನಂದಾ ಕರ್ಮಕಾಂಡ ಹೊರತೆಗೆಯಬೇಕು. ಖಾಸಗಿ ಬಸ್ ನಿಲ್ದಾಣಕ್ಕೆ 30ಕೋಟಿ ಪ್ರಾಜೆಕ್ಟ್ ಮಾಡಿ ಎಸ್ಟಿಮೇಟ್ ಮಾಡಿದ್ದನು. ಅವನ್ಯಾರೋ ಕಂಟ್ರಾಕ್ಟರ್ ಕೈಯಲ್ಲಿ ಗುಂಡಿ ಹೊಡೆಸಿದ್ದಾನೆ. ಅದಕ್ಕೆ ನಾನು ಹಣ ಕೊಡಿಸಬೇಕಾ. ಅಲ್ಲಿ ಹೋಗಿ ನೋಡಿ ತಗಡು ಹೊಡೆಸಿ ಇಟ್ಟಿದ್ದಾನೆ. ಅಂಬೇಡ್ಕರ್ ಭವನ ಗುಂಡಿ ಆಗಿದೆ, ನೀರು ನಿಂತಿದೆ. ಅದನ್ನ ನಾನು ಹೋಗಿ ಕ್ಲೀನ್ ಮಾಡಿಸಬೇಕು ಅಂತ ಯೋಗೇಶ್ವರ್ ವಿರುದ್ಧ ಕಿಡಿಕಾರಿದ್ದಾರೆ.