Fri,May03,2024
ಕನ್ನಡ / English

ನಾನು ರಾಸಲೀಲೆ ಮಾಡಲು ಹೋಗ್ತಿರಲಿಲ್ಲ, ರೆಸ್ಟ್ ಮಾಡಲು ಹೋಗ್ತಿದ್ದೆ: ಯೋಗೇಶ್ವರ್ ಗೆ ಹೆಚ್ ಡಿಕೆ ತಿರುಗೇಟು | ಜನತಾ ನ್ಯೂಸ್

14 Mar 2022
2622

ಬೆಂಗಳೂರು : ಕುಮಾರಸ್ವಾಮಿ ಫೈವ್​ಸ್ಟಾರ್​ ಹೋಟೆಲ್​ನಲ್ಲಿ ರಾಸಲೀಲೆ ಆಡ್ತಿದ್ದರು ಅಂತ ಯೋಗೇಶ್ವರ್ ಆರೋಪಿಸಿದ್ದಾರೆ. ಯೋಗೇಶ್ವರ್​ ಹೇಳಿಕೆಗೆ ಕೆಂಡಮಂಡಲರಾದ ಕುಮಾರಸ್ವಾಮಿ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ತಾಜ್ ವೆಸ್ಟೆಂಡ್‍ನಲ್ಲಿ ನಾನು ರಾಸಲೀಲೆ ಮಾಡಲು ಹೋಗುತ್ತಿರಲಿಲ್ಲ ಎಂದು ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈಗಲೂ ತಾಜ್ ವೆಸ್ಟೆಂಡ್​ ಹೋಟಲ್​ಗೆ ಹೋಗ್ತೀನಿ. ನನ್ನದು ತೆರೆದ ಪುಸ್ತಕ. ನನ್ನ ಪಿಎ ಈಗಲೂ ಆ ಹೊಟೆಲ್‍ನಲ್ಲಿಯೇ ಇರುತ್ತಾರೆ. ನಾನು ಒಬ್ಬನೆ ಅಲ್ಲ ನನ್ನ ಜೊತೆ ಸಾ.ರಾ ಮಹೇಶ್ ಅವರು ಕೂಡಾ ಇರುತ್ತಿದ್ದರು. ಇದನ್ನೇಲ್ಲಾ ಇವನ ಹತ್ತಿರ ನೋಡಿ ಕಲಿಯಬೇಕಿತ್ತಾ? ನಾವೆಲ್ಲಾ ಹೋಟೆಲ್‍ನಲ್ಲಿದ್ದರೆ ಇವನೇನು ಗುಡಿಸಲಲ್ಲಿ ಇರುತ್ತಿದ್ದನಾ? ಇವನ ಬಗ್ಗೆ ನನಗೆ ಗೊತ್ತಿಲ್ಲವಾ ಇಲ್ಲೆ ಯು.ಬಿ ಸಿಟಿ ಪಕ್ಕದಲ್ಲಿ ಇವನು ಇದ್ದನು. ನನ್ನದು ಕದ್ದು ಮುಚ್ಚಿ ಯಾವುದೂ ಇಲ್ಲ ಎಂದರು.

ಯೋಗೇಶ್ವರ್​ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಇವನತ್ರ ನೋಡಿ ನಾನು ಕಲಿಯಬೇಕಿತ್ತಾ. ಇವನು ಗುಡಿಸಲಲ್ಲಿ ಇದ್ದನಾ? ಇಲ್ಲೇ ಯು,ಬಿ ಸಿಟಿ ಪಕ್ಕದಲ್ಲೇ ಇದ್ನಲ್ಲ. ನಾನು ಯಾವ ವ್ಯವಹಾರವನ್ನು ಕದ್ದುಮುಚ್ಚಿ ಮಾಡಿಲ್ಲ ಸ್ವಾಮಿ ಅವನನ್ನ ನೋಡಿ ನಾನು ಕಲಿಯಬೇಕಾಗಿರೋದು ಏನು ಇಲ್ಲ ಅಂತ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಚನ್ನಪಟ್ಟಣದಲ್ಲಿ ಕೆಲಸವೇ ಅಗಿಲ್ಲ ಅಂತ ಚನ್ನಪಟ್ಟಣಕ್ಕೆ ಬರಲಿ ನಾನು ಶಾಸಕನಾಗಿ ಏನು ಮಾಡ್ಬೇಕೋ ಎಲ್ಲ ಮಾಡಿದ್ದೇನೆ. ಬಸ್ ಸ್ಟಾಂಡ್ ನಂದಾ ಕರ್ಮಕಾಂಡ ಹೊರತೆಗೆಯಬೇಕು. ಖಾಸಗಿ ಬಸ್ ನಿಲ್ದಾಣಕ್ಕೆ 30ಕೋಟಿ ಪ್ರಾಜೆಕ್ಟ್ ಮಾಡಿ ಎಸ್ಟಿಮೇಟ್ ಮಾಡಿದ್ದನು. ಅವನ್ಯಾರೋ ಕಂಟ್ರಾಕ್ಟರ್ ಕೈಯಲ್ಲಿ ಗುಂಡಿ ಹೊಡೆಸಿದ್ದಾನೆ. ಅದಕ್ಕೆ ನಾನು ಹಣ ಕೊಡಿಸಬೇಕಾ. ಅಲ್ಲಿ ಹೋಗಿ ನೋಡಿ ತಗಡು ಹೊಡೆಸಿ ಇಟ್ಟಿದ್ದಾನೆ. ಅಂಬೇಡ್ಕರ್ ಭವನ ಗುಂಡಿ ಆಗಿದೆ, ನೀರು ನಿಂತಿದೆ. ಅದನ್ನ ನಾನು ಹೋಗಿ ಕ್ಲೀನ್ ಮಾಡಿಸಬೇಕು ಅಂತ ಯೋಗೇಶ್ವರ್​ ವಿರುದ್ಧ ಕಿಡಿಕಾರಿದ್ದಾರೆ.

RELATED TOPICS:
English summary :Five Star Hotel I went to rest: HD Kumarswammy

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...