15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ | JANATA NEWS
ಬೆಂಗಳೂರು : 6 ರಿಂದ 8 ನೇ ತರಗತಿಯ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಚಾಲನೆ ಕೊಟ್ಟಿದ್ದು, 15 ಸಾವಿರ ಶಿಕ್ಷಕರ ನೇಮಕಕಕ್ಕೆ ಮಾರ್ಚ್ 21 ರಂದು ಅಧಿಸೂಚನೆ ಹೊರಡಿಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಪ್ರಸುತ್ತ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ವಿಭಾಗಕ್ಕೆ 5000 ಹುದ್ದೆಗಳು ಸೇರಿ ಒಟ್ಟು 15,000 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಶಿಕ್ಷಕರ ಕೊರತೆ ನೀಗಿಸಲು ವಿಶೇಷವಾಗಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೂ (ಬಿಎಡ್, ಟಿಇಟಿ ಮಾಡಿದ್ದರೆ), ಮಂಗಳಮುಖಿಯರಿಗೂ ಪ್ರತಿ ಪ್ರವರ್ಗದಲ್ಲಿ ಶೇ. 1ರಷ್ಟು ಸಿಇಟಿ ಪರೀಕ್ಷೆಗೆ ಅವಕಾಶ ಇರಲಿದೆ ಎಂದು ಹೇಳಿದ್ದಾರೆ.
ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ಈ ಲಿಂಕ್ ನಲ್ಲಿ https://www.schooleducation.kar.nic.in/ ಪಡೆದುಕೊಳ್ಳಬಹುದಾಗಿದೆ. ಸದರಿ ಹುದ್ದೆಗಳ ಆಕಾಂಕ್ಷಿಗಳ ನೀಡಲಾಗಿರುವ ಲಿಂಕ್ ಅರ್ಜಿ ಸಲ್ಲಿಸಬಹುದಾಗಿದೆ.
ಸಾಮಾನ್ಯ ಪ್ರವೇಶ ಪರೀಕ್ಷೆಗೆ ಮಾ.22 ರಿಂದ ಏ.22ರ ವರೆಗೆ ಅರ್ಜಿ ಸಲ್ಲಿಕೆ ಅವಕಾಶವಿದೆ. ಆರರಿಂದ ಎಂಟು ತಿಂಗಳಿನಲ್ಲಿ ಪ್ರಕ್ರಿಯೆ ಪೂರ್ಣವಾಗಲಿದೆ ಎಂದರು.
ಪರೀಕ್ಷೆಗೆ ಮೂರು ಪತ್ರಿಕೆಗಳು ಇರುತ್ತದೆ. ಮೊದಲ ಮತ್ತು ಎರಡನೇ ಪತ್ರಿಕೆ ತಲಾ 150 ಅಂಕಗಳು, ಮೂರನೇ ಪತ್ರಿಕೆ ನೂರು ಅಂಕ ಇರುತ್ತದೆ. ಎರಡನೇ ಪತ್ರಿಕೆ ಅರ್ಹತಾ ಅಂಕಗಳನ್ನು 50 ರಿಂದ 45 ಕ್ಕೆ ಮತ್ತು ಮೂರನೇ ಪತ್ರಿಕೆ 60ರಿಂದ 50ಕ್ಕೆ ಇಳಿಕೆ ಮಾಡಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ
*ಪದವಿಯಲ್ಲಿ ಕನಿಷ್ಠ ಶೇ. 50 ಅಂಕಗಳ ಜೊತೆಯಲ್ಲಿ ಪ್ರಾಥಮಿಕ ಶಿಕ್ಷಣ ತರಬೇತಿಯ ಡಿಪ್ಲೋಮಾ ಕೋರ್ಸ್ ಪೂರ್ಣ ಮಾಡಿರಬೇಕು. ಅಥವಾ
*ಪದವಿಯಲ್ಲಿ ಕನಿಷ್ಠ ಶೇ.50 ಅಂಕಗಳ ಜೊತೆಯಲ್ಲಿ ಬಿ.ಇಡಿ ಪದವಿ ಪಡೆದಿರಬೇಕು.
* ವಿಶೇಷ ಶಿಕ್ಷಣದಲ್ಲಿ ಪದವಿ ಪಡೆದಿರಬೇಕು ಅಥವಾ PUCಯಲ್ಲಿ ಕನಿಷ್ಠ ಶೇ.50 ಅಂಕಗಳೊಂದಿಗೆ ಉತ್ತೀರ್ಣ ಹಾಗೂ 4 ವರ್ಷ ಬ್ಯಾಚುಲರ್ ಆಫ್ ಎಲಿಮೆಂಟರಿ ಪದವಿ ಅಥವಾ ಬ್ಯಾಚುಲ್ ಆಫ್ ಎಜುಕೇಶನ್ ಪದವಿ ಪಡೆದಿರಬೇಕು.
*SC/ST/ಪ್ರವರ್ಗ 1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶೇ.45ರಷ್ಟು ಅಂಕಗಳ ಸಡಿಲಿಕೆ
15,000 ಶಿಕ್ಷಕರ (6-8) ನೇಮಕಕ್ಕೆ ಮಾರ್ಚ್ 21ಕ್ಕೆ ಅಧಿಸೂಚನೆ ಹೊರಡಿಸಲಾಗುತ್ತದೆ.
ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭ - 23 ಮಾರ್ಚ್, 2022.
ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ - 22 ಏಪ್ರಿಲ್ 2022.
ಸಿಇಟಿ ಪರೀಕ್ಷೆ ದಿನಾಂಕ - ಮೇ ತಿಂಗಳ 21 ಮತ್ತು 22.