ಟ್ರಾನ್ಸ್ಫಾರ್ಮರ್ ಸ್ಫೋಟ : ಬೆಸ್ಕಾಂ ನಿರ್ಲಕ್ಷ್ಯದಿಂದ ಅಮಾಯಕ ತಂದೆ, ಮಗಳು ಸಾವು | JANATA NEWS
ಬೆಂಗಳೂರು : ಬೆಂಗಳೂರಿನ ಉಳ್ಳಾಲ ಬಳಿಯ ಮಂಗನಹಳ್ಳಿ ಬ್ರಿಡ್ಜ್ ಬಳಿ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು ಗಾಯಗೊಂಡಿದ್ದ ತಂದೆ ಶಿವರಾಜ್ ಹಾಗೂ ಪುತ್ರಿ ಚೈತನ್ಯಾಗೆ (19) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಚಿಕಿತ್ಸೆ ಫಲಿಸದೇ ನಿನ್ನೆಯೇ ಶಿವರಾಜ್ (55) ಮೃತಪಟ್ಟಿದ್ದರು. ಇಂದು ಮುಂಜಾನೆ ಯುವತಿ ಕೂಡ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮನೆಯಲ್ಲಿ ಮದುವೆ ಕಾರ್ಯಕ್ರಮವಿದ್ದ ಕಾರಣ ಬಟ್ಟೆ ಖರೀದಿಗೆ ಮಗಳೊಂದಿಗೆ ಉಲ್ಲಾಳ ಉಪನಗರಕ್ಕೆ ಬಂದು ಬಟ್ಟೆ ಖರೀದಿ ಮಾಡಿಕೊಂಡು ಅಪ್ಪ-ಮಗಳು ಬೈಕ್ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಮಂಗನಹಳ್ಳಿ ಬ್ರಿಡ್ಜ್ ಬಳಿ ಸಡನ್ ಆಗಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಸ್ಫೋಟದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಭಸ್ಮವಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ತಂದೆ ಶಿವರಾಜು, ಮಗಳು ಚೈತನ್ಯರನ್ನು ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆ ರವಾನಿಸಿದ್ದರು.
ಬೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ಜ್ಞಾನಭಾರತಿ ಠಾಣೆಯಲ್ಲಿ ಸೆಕ್ಷನ್ 304(a)ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.