Sun,May05,2024
ಕನ್ನಡ / English

ನಾನು ಯಾವತ್ತೂ ಹುಟ್ಟಿದ ಹಬ್ಬ ಆಚರಣೆ ಮಾಡಲ್ಲ, ಕಾರಣ ಯಾವಾಗ ಹುಟ್ಟಿದ್ದೇನೆ ಎಂದು ಗೊತ್ತಿಲ್ಲ | JANATA NEWS

24 Mar 2022
2313

ಬೆಂಗಳೂರು : ವಿಧಾನಸಭೆಯಲ್ಲಿ ತಮ್ಮ ಮಾತುಗಳ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈಶ್ವರಪ್ಪರ ಕಾಲ್ ಎಳೆದರು.

ಈಶ್ವರಪ್ಪ ಅವರು ಇವತ್ತು ಸಿದ್ದರಾಮಯ್ಯ ಕ್ಲೀನ್ ಶೇವ್ ನೋಡಿ, ಏನ್ ಸ್ಮಾರ್ಟ್ ಆಗಿ ಬಂದಿದ್ದೀರಾ ಎಂದು ಕಿಚಾಯಿಸಿದರು. ಆಗ ಹಾಸ್ಯದಲ್ಲೇ ಉತ್ತರ ಕೊಟ್ಟ ಸಿದ್ದರಾಮಯ್ಯ ವಾರಕ್ಕೊಮ್ಮೆ ಹೀಗೆ ಶೇವ್ ಮಾಡಿಸ್ತೀನಿ. ಇಲ್ಲದಿದ್ದರೆ ನಿನ್ನಂತವರು ವಯಸ್ಸಾಯ್ತು ಅಂತಾ ಕಾಲೆಳೆಯುತ್ತಾರಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಅನೇಕರು ಹುಟ್ಟು ಹಬ್ಬದ ಶುಭಾಶಯ ಕೋರುವಾಗ ವಯಸ್ಸು ಹಾಕಲ್ಲ. ನಿಮಗೆ 75 ಆಗಿದೆ ಎಂದು ಯಾರು ಹೇಳುತ್ತಾರೆ? ಯಾರೂ ಹೇಳಲ್ಲ ಎಂದು ಸಿದ್ದರಾಮಯ್ಯ ಅವರ ಕಾಲೆಳೆದರು.

ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ನನಗೂ ಗೊತ್ತಿಲ್ಲ,ನನಗೆ ಎಷ್ಟು ವಯಸ್ಸು ಅಂತ ಗೊತ್ತಿಲ್ಲ. ನನಗೂ ಗೊತ್ತಿಲ್ಲ, ನಮ್ಮ ಮನೆಯರಿಗೂ ಗೊತ್ತಿಲ್ಲ. ನನ್ನ ಹುಟ್ಟಿದ ದಿನವನ್ನ ನಮ್ಮ‌ಸ್ಕೂಲ್ ಮೇಷ್ಟ್ರು ರಾಜಪ್ಪ ಅಂತ ಅವರೇ ಬರೆದುಕೊಂಡಿದ್ದಾರೆ.. 3-8-1947 ಅಂತ ಬರೆದುಕೊಂಡಿದ್ದಾರೆ.. ಅದಕ್ಕೆ ನಾನು ನನ್ನ ಹುಟ್ಟುಹಬ್ಬವನ್ನೇ ಆಚರಿಸಿಕೊಳ್ಳಲ್ಲ. ಮೇಷ್ಟ್ರು ಹೇಳಿದ ದಿನಾಂಕದ ಪ್ರಕಾರ ನನಗೆ 75 ವರ್ಷ ಎಂದು ಹೇಳಿದರು.

ನಾನು ಯಾವತ್ತೂ ಹುಟ್ಟಿದ ಹಬ್ಬ ಆಚರಣೆ ಮಾಡಲ್ಲ, ಕಾರಣ ಯಾವಾಗ ಹುಟ್ಟಿದ್ದೇನೆ ಎಂದು ಗೊತ್ತಿಲ್ಲ. ನಮ್ಮ ಅಪ್ಪ ಅಮ್ಮ ಹೆಬ್ಬೆಟ್ಟು ಒತ್ತುವವರು ಹಾಗಾಗಿ ಹುಟ್ಟಿದ ದಿನವನ್ನು ಬರೆದುಕೊಂಡಿರಲಿಲ್ಲ. ಹಾಗಾಗಿ ಶಾಲೆಯಲ್ಲಿ ಬರೆದುಕೊಂಡ ಪ್ರಕಾರ ನನಗೆ 75 ವರ್ಷ ಎಂದು ಅಂದು ಕೊಂಡಿದ್ದೇನೆ. ಆದರೆ ನೀನು 60 ವರ್ಷ ಎಂದರೆ ಪರವಾಗಿಲ್ಲ ಎಂದು ಈಶ್ವರಪ್ಪ ಅವರ ಕಾಲೆಳೆದರು.

RELATED TOPICS:
English summary :I am old enough to shave once a week: Siddaramaiah

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...