ನವೀನ್ ನಿವಾಸಕ್ಕೆ ರಾಜ್ಯಪಾಲರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ | JANATA NEWS
ಹಾವೇರಿ: : ಉಕ್ರೇನ್ನಲ್ಲಿ ಶೆಲ್ ದಾಳಿಯಲ್ಲಿ ಮೃತಪಟ್ಟ ನವೀನ್ ಗ್ಯಾನಗೌಡರ್ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ ಸಾಂತ್ವನ ಹೇಳಿದರು.
ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನಿವಾಸಕ್ಕೆ ಭೇಟಿ ನೀಡಿದ ರಾಜ್ಯಪಾಲರು ನವೀನ್ ಭಾವಚಿತ್ರಕ್ಕೆ ಹೂವು ಹಾಕಿ ನಮಸ್ಕರಿಸಿದರು.
ಬಳಿಕ ನವೀನ್ ತಂದೆ ಶೇಖರಗೌಡ ಮತ್ತು ತಾಯಿ ವಿಜಯಲಕ್ಷ್ಮೀ ಸೇರಿ ಕುಟುಂಬಸ್ಥರೊಂದಿಗೆ ಮಾತನಾಡಿದ ಅವರು, ಮಾರ್ಚ್ 21 ರಂದು ನವೀನ್ ಮೃತದೇಹ ಬಂದಾಗ ನಾನೂ ಬರಬೇಕು ಎಂದುಕೊಂಡಿದ್ದೆ. ಆದರೆ, ಮಧ್ಯಪ್ರದೇಶದಲ್ಲಿ ಮೊದಲೇ ಕಾರ್ಯಕ್ರಮ ನಿಗದಿ ಆಗಿದ್ದರಿಂದ ಬರಲು ಆಗಲಿಲ್ಲ. ಯಾವುದಕ್ಕೂ ಹೆದರಬೇಡಿ, ನಿಮ್ಮ ಜೊತೆ ನಾವಿದ್ದೇವೆ ಎಂದು ನವೀನ್ ಕುಟುಂಬಸ್ಥರಿಗೆ ರಾಜ್ಯಪಾಲರು ಸಾಂತ್ವನ ಹೇಳಿದರು.
RELATED TOPICS:
English summary :Governor Thawar Chand Gehlot Visits Naveen House Who Died In Ukraine