Sun,May19,2024
ಕನ್ನಡ / English

ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಅಪ್ಪು-ಕಂಚಿನ ಪುತ್ಥಳಿ ಆನಾವರಣ, ಪ್ರಶಸ್ತಿ ಪ್ರಧಾನ : ಗಂಧದಗುಡಿ ಉದ್ಯಾನವನ ಉದ್ಘಾಟನೆ | JANATA NEWS

27 Mar 2022
1989

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕೇಂದ್ರ ಕಛೇರಿಯ ಡಾ.ರಾಜಕುಮಾರ ಗಾಜಿನ ಮನೆ ಅವರಣದಲ್ಲಿರುವ ಡಾ.ರಾಜಕುಮಾರ ಪ್ರತಿಮೆ ಪಕ್ಕದಲ್ಲಿ, ಬಿಬಿಎಂಪಿ ನೌಕರರ ಕನ್ನಡ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾದ, ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ ಪ್ರತಿಮೆಯನ್ನು ಇಂದು ರವಿವಾರ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು.

ಇದೆ ಸಂದರ್ಭದಲ್ಲಿ ಗಂಧದಗುಡಿ ಉದ್ಯಾನವನ ಉದ್ಘಾಟನೆ ಮತ್ತು ಡಾ.ಪುನೀತ್ ರಾಜಕುಮಾರ ಪ್ರಶಸ್ತಿ ಪ್ರಧಾನ ಸಮಾರಂಭ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ತೋಟಗಾರಿಕೆ ಸಚಿವರಾದ ಮುನಿರತ್ನರವರು, ಶಾಸಕರಾದ ರಿಜ್ಞಾನ್ ಆರ್ಹದ್, ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನರವರು ಮತ್ತು ಡಾ.ಪುನೀತ್ ರಾಜಕುಮಾರ ರವರ ಧರ್ಮಪತ್ನಿ ಶ್ರೀಮತಿ ಆಶ್ವಿನಿರವರು ಹಾಗೂ ಅಣ್ಣ ಹಾಗೂ ನಟರಾದ ರಾಘವೇಂದ್ರ ರಾಜಕುಮಾರ್, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ಗೌರವ್ ಗುಪ್ತಾರವರು, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ವಿಶೇಷ ಆಯುಕ್ತರಾದ ಮನೋಜ್ ಜೈನ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ವಿಶೇಷ ಆಯುಕ್ತರಾದ ರಂಗಪ್ಪ, ಹಿಂದುಳಿದ ವರ್ಗಗಳ ಇಲಾಖೆ ಆಯುಕ್ತರಾದ ಕೆ.ಎ.ದಯಾನಂದ್, ಉಪ ಆಯುಕ್ತರಾದ ಟಿ.ಯೋಗೇಶ್, ಮಾಜಿ ಮಹಾಪೌರರು, ಕನ್ನಡ ಸಂಘದ ಗೌರವಾಧ್ಯಕ್ಷರಾದ ಜೆ.ಹುಚ್ಚಪ್ಪ, ಮಾಜಿ ಮಹಾಪೌರರಾದ ಗೌತಮ್ ಕುಮಾರ್, ಬೆಂಗಳೂರುನಗರ ಜಿಲ್ಲಾ ಬಿ.ಜೆ.ಪಿ.ಅಧ್ಯಕ್ಷರಾದ ಎನ್.ಆರ್.ರಮೇಶ್ ರವರು, ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಎ.ಅಮೃತ್ ರಾಜ್ ರವರು ದೀಪಾ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

ಅಪ್ಪು ಪ್ರತಿಮೆ ಲೋಕರ್ಪಣೆ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿರವರು, ಪುನೀತ್ ರಾಜಕುಮಾರ್ ಹೆಸರಾಗಿ ಉಳಿದಿಲ್ಲ, ಕನ್ನಡಿಗರ ಉಸಿರಾಗಿದ್ದಾರೆ. ಪುನೀತ್ ಆಗಲಿಕೆ ನೋವು ಕನ್ನಡಿಗರ ಪ್ರತಿ ಮನೆಯಲ್ಲಿ ಕಾಡುತ್ತಿದೆ. ಕರ್ನಾಟಕದ ಎಲ್ಲ ಕಡೆಗಳಲ್ಲಿ ಪುನೀತ್ ರವರ ಭಾವಚಿತ್ರಕ್ಕೆ ಜನರು ಪೂಜೆ ಸಲ್ಲಿಸುತ್ತಿದ್ದಾರೆ. ಪುನೀತ್ ರವರ ಸಮಾಧಿ ಸ್ಥಳಕ್ಕೆ ಲಕ್ಷಾಂತರ ಜನ ಬರುತ್ತಿದ್ದಾರೆ. ಇದನ್ನ ನೋಡಿದರೆ ಪುನೀತ್ ರವರನ್ನು ನಾವು ಕಳೆದುಕೊಂಡಿಲ್ಲ. ಪುನೀತ್ ರವರು ನಗು ಮತ್ತು ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದಾರೆ. ಬೆಟ್ಟದ ಹೂವು ಚಿತ್ರದ ಅಭಿನಯವನ್ನು ಹೇಗೆ ನಟಿಸಿದೆ, ಎಂದು ಕೇಳಿದಾಗ, ನನ್ನ ನಟನೆಗೆ ನಮ್ಮ ತಂದೆಯವರೇ ಸ್ಪೂರ್ತಿಯಾಗಿದ್ದಾರೆ, ಎಂದು ಪುನೀತ್ ರವರು ಹೇಳಿದರು. ಮುಗ್ದತೆ ಕಾಪಾಡಿಕೊಂಡಿರುವ ಇಬ್ಬರು ನಟರೆಂದರೆ ಡಾ.ರಾಜ್ ಹಾಗೂ ಪುನೀತ್ ರವರು. ಕರ್ನಾಟಕ ರತ್ನ ಪ್ರಶಸ್ತಿಯನ್ನು ಅತಿ ಶೀಘ್ರದಲ್ಲಿ ಡಾ.ರಾಜ್ ಕುಟುಂಬದವರ ಜೊತೆ ಚರ್ಚಿಸಿ, ಅದ್ದೂರಿಯಾಗಿ ನೇರವೆರಿಸಲಾಗುವುದು, ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯ ಮಹನೀಯರುಗಳಿಗೆ ಡಾ.ಪುನೀತ್ ರಾಜಕುಮಾರ ಪ್ರಶಸ್ತಿಯನ್ನು ಪ್ರಣಯರಾಜ ಶ್ರೀನಾಥ್, ಚಲನಚಿತ್ರ ನಟಿ ತಾರ ಆನುರಾಧ, ನಿರ್ದೇಶಕ ಎಸ್.ಕೆ.ಭಗವಾನ್, ಉಪ ಪೂಲೀಸ್ ಆಯುಕ್ತರಾದ ಪರಮೇಶ್ವರ್, ಸಾಹಿತಿ ಡಾ.ಮರುಳು ಸಿದ್ದಪ್ಪ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಪತ್ರಕರ್ತರುಗಳಾದ ಆರ್.ಪಿ.ಜಗದೀಶ್, ರಂಗನಾಥ್ ಭಾರದ್ವಜ್, ಜಯಪ್ರಕಾಶ್ ಶೆಟ್ಟಿ, ನಟರಾದ ಹೊನ್ನವಳ್ಳಿ ಕೃಷ್ಣ, ಖ್ಯಾತ ಹಿನ್ನಲೆ ಗಾಯಕಿ ರಮ್ಯ ವಸಿಷ್ಠ, ಡಾ.ರಾಜ್ ಕುಟುಂಬದ ಅಪ್ತರಾದ ಚನ್ನ, ವೈದ್ಯರಾದ ಡಾ.ರಂಗಸ್ವಾಮಿ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.

RELATED TOPICS:
English summary :Appu-Bronze Statue unveiled at BBMP Headquarters, Awards distributed : Gandharagudi park inaugurated

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...