ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ ಶಿಪ್ ನಿಲ್ಲಿಸೋದಿಲ್ಲ, ಶಾದಿ ಮಹಲ್ ಮಾತ್ರ ನಿಲ್ಲಿಸ್ತೇವೆ | JANATA NEWS
ಬೆಂಗಳೂರು : ವಿಧಾನಸೌಧದಲ್ಲಿ ಬಜೆಟ್ ಅಧಿವೇಶನದಲ್ಲಿ ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ ಶಿಪ್ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಮಾಹಿತಿ ನೀಡಿದ್ದಾರೆ.
ವಿಧಾನಪರಿಷತ್ನಲ್ಲಿ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಮಕ್ಕಳ ಸ್ಕಾಲರ್ ಶಿಪ್ ವಿಚಾರವಾಗಿ ವಿಷಯ ಪ್ರಸ್ತಾಪಿಸಿದ್ದರು, ಮಕ್ಕಳಿಗೆ ಸರ್ಕಾರ ನೀಡುತ್ತಿರೋ ಸ್ಕಾಲರ್ ಶಿಪ್ ನಿಲ್ಲಿಸುವ ಬಗ್ಗೆ ಬಿ.ಕೆ ಹರಿಪ್ರಸಾದ್ ಬಸವರಾಜ್ ಬೊಮ್ಮಾಯಿ ಅವ್ರನ್ನು ಪ್ರಶ್ನೆ ಮಾಡಿದ್ದಾರೆ.
ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಲಾ ಮಕ್ಕಳ ಸ್ಕಾಲರ್ ಶಿಪ್, ಹೈಯರ್ ಎಜುಕೇಶನ್ ನಿಲ್ಲಿಸುವ ಕೆಲ ಪ್ರಯತ್ನ ಈ ಹಿಂದೆ ಆಗಿತ್ತು. ಆದರೆ ಯಾವುದನ್ನೂ ಕೂಡ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅದರಲ್ಲೂ ಯಾವುದೇ ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ಶಿಪ್ ನಿಲ್ಲಿಸೋದಿಲ್ಲ, ಶಾದಿ ಮಹಲ್ ಮಾತ್ರ ನಿಲ್ಲಿಸುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಶಾಲಾ ಮಕ್ಕಳ ಸ್ಕಾಲರ್ ಶಿಪ್, ಹೈಯರ್ ಎಜುಕೇಶನ್ ನಿಲ್ಲಿಸುವ ಕೆಲ ಪ್ರಯತ್ನ ಆಗಿತ್ತು. ಆದರೆ ಯಾವುದನ್ನೂ ಕೂಡ ನಿಲ್ಲಿಸುವುದಿಲ್ಲ. ಮಕ್ಕಳ ಸ್ಕಾಲರ್ ಶಿಪ್ ಗೆಂದೇ 100 ಕೋಟಿ ರೂಪಾಯಿ ಅನುದಾನವನ್ನೂ ಮಂಜೂರು ಮಾಡ್ತೇನೆ.
ಯಾವುದೇ ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ ಶಿಪ್ ನಿಲ್ಲಿಸೋದಿಲ್ಲ. ಮಕ್ಕಳ ವಿಷಯದಲ್ಲಿ ಯಾವುದೇ ತಾರತಮ್ಯ ಮಾಡದೇ ಅವರಿಗೆ ಸ್ಕಾಲರ್ ಶಿಪ್ ಒದಗಿಸುತ್ತೇವೆ. ಶಾದಿ ಮಹಲ್ ಮಾತ್ರ ನಿಲ್ಲಿಸುತ್ತೇವೆ, ಅದನ್ನು ಬಿಟ್ಟು ಅಲ್ಪಸಂಖ್ಯಾತರ ಯಾವುದೇ ಯೋಜನೆ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.